ಸಿದ್ದರಾಮಯ್ಯ ಭೇಟಿಯಾದ ವಿವಿಧ ಸಮುದಾಯದ ಸ್ವಾಮಿಗಳು: ಸಿಎಂಗೆ ನೈತಿಕ ಬೆಂಬಲ ಘೋಷಣೆ

Prasthutha|

- Advertisement -

ಬೆಂಗಳೂರು: ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯದ ಸ್ವಾಮೀಜಿಗಳ ನಿಯೋಗ ಇಂದು (ಆಗಸ್ಟ್​ 25) ಕಾವೇರಿ ನಿವಾಸಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.

ಈ ಮೂಲಕ ಸ್ವಾಮೀಜಿಗಳ ನಿಯೋಗ ಸಿಎಂಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿತು.

- Advertisement -

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ಸ್ವಾಮೀಜಿಗಳು, ತೀವ್ರವಾಗಿ ಖಂಡಿಸಿದ್ದು, ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದದರು.

ಸಂಪುಟದ ಸಚಿವರು, ಶಾಸಕರು ಸೇರಿದಂತೆ ಹೈಕಮಾಂಡ್​ ನಾಯಕರು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ. ಈಗ ಹಿಂದೂಳಿದ ವರ್ಗಗಳ ಸ್ವಾಮೀಜಿಗಳು ಸಹ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ನಿಮ್ಮ ಹಿಂದೆ ನಾವಿದ್ದೇವೆ ಎನ್ನುವ ಸಂದೇಶ ರವಾನಿಸಿದ್ದಾರೆ.



Join Whatsapp