ಬೆಂಗಳೂರು: ಇಬ್ಬರು ಹೆಣ್ಣು ಮಕ್ಕಳ ಹತ್ಯೆ; ಮಲತಂದೆ ಬಂಧನ

Prasthutha|

ಬೆಂಗಳೂರು: ದಾಸರಹಳ್ಳಿಯಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ ಹಂತಕನನ್ನು ಅಮೃತಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ.

- Advertisement -


ಸಮಿತ್ ಬಂಧಿತ ಆರೋಪಿ. ಈತ ಕೊಲೆ ಮಾಡಿದ ಬಳಿಕ ಬಟ್ಟೆ ಬದಲಿಸಿಕೊಂಡು ಮನೆಯಿಂದ ಹೊರಗಡೆ ಹೋಗಿದ್ದ. ತಲೆಮರೆಸಿಕೊಂಡಿದ್ದವನನ್ನು ಘಟನೆ ನಡೆದ 2 ದಿನಗಳ ಒಳಗಾಗಿ ಪೊಲೀಸರು ಬಂಧಿಸಿದ್ದಾರೆ.


ಆರೋಪಿ ಮಲತಂದೆ ಸಮಿತ್ ಮಾತಿಗೆ ಹೆಣ್ಣು ಮಕ್ಕಳು ವಿರೋಧ ವ್ಯಕ್ತಪಡಿಸುತ್ತಿದ್ದರು ಎಂಬ ಕೋಪಕ್ಕೆ ಹೆಣ್ಣುಮಕ್ಕಳಿಬ್ಬರನ್ನು ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯ ವೇಳೆ ಬಹಿರಂಗವಾಗಿದೆ.
ಆರೋಪಿ ಸಮಿತ್ ಮಕ್ಕಳ ಮೇಲೆ ಸಾಕಷ್ಟು ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

- Advertisement -

ಕೊಲೆ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



Join Whatsapp