ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಸಾವು

Prasthutha|

ಶಿವಮೊಗ್ಗ: ಕಾಡಾನೆ ದಾಳಿಗೆ 41 ವರ್ಷದ ಕೃಷಿ ಕಾರ್ಮಿಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ವನ್ಯಜೀವಿ ವಿಭಾಗದ ಪುರದಾಳ್ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -


ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಮೃತರು.


ಹನುಮಂತಪ್ಪ ಕಳೆದ ಐದು ವರ್ಷಗಳಿಂದ ಅಡಿಕೆ ತೋಟದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದನು. ಘಟನೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ ಮಾತನಾಡಿ, ಹನುಮಂತಪ್ಪ ಅವರು ಅಶ್ಫಾಕ್ ಅಹ್ಮದ್ ಖಾನ್ ಒಡೆತನದ ಎಸ್ಟೇಟ್ ನಲ್ಲಿ ಕೆಲಸ ಮುಗಿಸಿ ಆಲದೇವರ ಹೊಸೂರಿನ ಮನೆಗೆ ವಾಪಸಾಗುತ್ತಿದ್ದಾಗ ಆನೆ ದಾಳಿ ಮಾಡಿದೆ. ಶವಪರೀಕ್ಷೆ ನಡೆಸಲಾಗಿದ್ದು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.



Join Whatsapp