ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ

Prasthutha|

►’ಗೃಹಲಕ್ಷ್ಮಿ ಹಣದಲ್ಲಿ ಊಟ ಹಾಕಿಸಿದ್ದ ಅಜ್ಜಿಯನ್ನು ಭೇಟಿಯಾದ ಸಿಎಂ

- Advertisement -

ಬೆಳಗಾವಿ: ಗೃಹಲಕ್ಷ್ಮೀ ಹಣದಿಂದ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿ ಲಂಗೋಟಿಯನ್ನು ಸಿಎಂ ಸಿದ್ದರಾಮಯ್ಯ ಇಂದು ಬೆಳಗಾವಿ ಏರ್ ಪೋರ್ಟ್ ನಲ್ಲಿ ಭೇಟಿ ಮಾಡಿದ್ದಾರೆ.


ಅಕ್ಕಾತಾಯಿಯನ್ನು ಸಿಎಂಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯಿಸಿದರು. ಈ ವೇಳೆ ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ. ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ.

- Advertisement -


ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ರವಿವಾರ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ಮಾಡಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.



Join Whatsapp