ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್: ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತ: ಕಾನೂನಿನಲ್ಲಿ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆಯಾಗುವಂತೆ ತಿದ್ದುಪಡಿಯನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.

- Advertisement -


‘ಮುಂದಿನ ವಾರದಿಂದ ಆರಂಭವಾಗಲಿರುವ ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ತಿದ್ದುಪಡಿಯನ್ನು ಮಂಡಿಸಲಾಗುವುದು. ಇದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಲು ವಿಳಂಬ ಮಾಡಿದಲ್ಲಿ ರಾಜಭವನದ ಎದುರು ಧರಣಿ ನಡೆಸಲಾಗುವುದು. ನಂತರ ಅನುಮೋದನೆಗೆ ರಾಷ್ಟ್ರಪತಿಗೆ ಕಳುಹಿಸಲಾಗುವುದು’ ಎಂದಿದ್ದಾರೆ.


ಕಳೆದ 20 ದಿನಗಳಿಂದ ಧರಣಿ ನಡೆಸುತ್ತಿರುವ ಕಿರಿಯ ವೈದ್ಯರಲ್ಲಿ ಮನವಿ ಮಾಡಿಕೊಂಡಿರುವ ಮಮತಾ, ‘ತುರ್ತು ಸೇವೆಗಳು ಸ್ಥಗಿತಗೊಂಡಿದ್ದು, ತಕ್ಷಣ ಕರ್ತವ್ಯಕ್ಕೆ ಮರಳಬೇಕು’ ಎಂದಿದ್ದಾರೆ.

- Advertisement -


‘ತಮ್ಮ ಸಹೋದ್ಯೋಗಿಯ ಸಾವಿಗೆ ನ್ಯಾಯಕ್ಕಾಗಿ ಬೇಡಿಕೆ ಇಟ್ಟಿರುವ ವೈದ್ಯರು ಮುಷ್ಕರ ಆರಂಭಿಸಿದ ದಿನದಿಂದಲೇ ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗಿದೆ. ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಮುಷ್ಕರ ನಡೆಸುತ್ತಾ ಬಹಳ ದಿನಗಳು ಕಳೆದಿವೆ. ನಿಮ್ಮ ನೋವು ನಮಗೆ ಅರ್ಥವಾಗುತ್ತಿದೆ. ಆದರೆ, ರೋಗಿಗಳು ಪರದಾಡುತ್ತಿದ್ದಾರೆ. ಅವರಿಗೆ ಚಿಕಿತ್ಸೆಯ ಅಗತ್ಯವಿದೆ’ ಎಂದಿದ್ದಾರೆ.



Join Whatsapp