PFI ಮಾದರಿಯಲ್ಲಿ SDPI ಪಕ್ಷವನ್ನೂ ನಿಷೇಧಿಸಬೇಕು: ಪ್ರಮೋದ್ ಮುತಾಲಿಕ್

Prasthutha|

ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೂಡಲೇ ಪಿಎಫ್ ಐ ಮಾದರಿಯಲ್ಲಿ ಎಸ್ ಡಿಪಿಐ ಪಕ್ಷವನ್ನು ನಿಷೇಧಿಸಬೇಕು ಎಂದು ಶ್ರೀ ರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

- Advertisement -


ಸೋಮವಾರ ಇಲ್ಲಿನ ಈದ್ಗಾ ಮೈದಾನದಲ್ಲಿ ರಾಣಿ ಚನ್ನಮ್ಮ ಗಜಾನನ ಮಹಾಮಂಡಳ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ವೇಳೆ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿಜೆ ವಿಚಾರದಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಎಸ್ ಡಿಪಿಐ ಅವರು ಈ ವಿಚಾರದಲ್ಲಿ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಪಿಎಫ್ ಐ ಮಾದರಿಯಲ್ಲಿ ಎಸ್ ಡಿಪಿಐ ನಿಷೇಧಿಸಬೇಕು ಎಂದು ಹೇಳಿದ್ದಾರೆ.

- Advertisement -

ಹಿಂದೂಗಳು ಶಾಂತಿಪ್ರಿಯರು ಎಂಬುದನ್ನು ತೋರಿಸುತ್ತ ಬಂದಿದ್ದೇವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಗಲಭೆ-ಗಲಾಟೆ ಆಗುತ್ತವೆ ಎಂದು ಹೇಳಿದ್ದರು. ಆದರೆ ಮೂರು ವರ್ಷಗಳಿಂದ ಶಾಂತಿಯುತ ಆಚರಣೆಯಾಗಿದೆ. ಗಣೇಶೋತ್ಸವ ವಿರೋಧಿಗಳು ಸಹಕಾರಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದರು.


ಸುಪ್ರೀಂ ಕೋರ್ಟ್ ತೀರ್ಪು ನೆಪದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿ.ಜೆ ಬಳಕೆಗೆ ನಿರ್ಬಂಧಿಸಿರುವುದು ಸರಿಯಲ್ಲ. ಮಸೀದಿ ಧ್ವನಿವರ್ಧಕಕ್ಕೂ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ. ಅಲ್ಲಿ ಕ್ರಮವಿಲ್ಲದೆ ವರ್ಷಕ್ಕೊಮ್ಮ ಆಚರಿಸುವ ಗಣೇಶೋತ್ಸವಕ್ಕೆ ಮಾತ್ರ ಯಾಕೆ? ಡಬಲ್ ಡಿ.ಜೆ. ಹಾಕಿ ಸಂಭ್ರಮಿಸಿ ಎಂದು ಗಣೇಶೋತ್ಸವ ಸಮಿತಿಗಳಿಗೆ ಕರೆ ನೀಡುತ್ತೇನೆ ಎಂದರು.


ಗಣೇಶ ಪ್ರಸಾದಕ್ಕೆ ನಿರ್ಬಂಧ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯಾಗಿದೆ. ಬಿಜೆಪಿಯೂ ಅಧಿಕಾರದಲ್ಲಿದ್ದಾಗ ಹಿಂದೂ ವಿರೋಧಿ ನೀತಿ ಅನುಸರಿಸಿ ನಮ್ಮನ್ನು ಬಂಧಿಸಿತ್ತು. ಮೋದಿಗೆ ನಮ್ಮ ಬೆಂಬಲ ಅಚಲ; ಸ್ಥಳೀಯ ಬಿಜೆಪಿ ನಾಯಕರಿಗಲ್ಲ. ಮೋದಿ ಇಲ್ಲವಾದರೆ ದೇಶ ಮಾರಾಟ ಮಾಡುವ ರಾಹುಲ್ ಗಾಂಧಿ ಬರುತ್ತಾನೆ ಎಂದು ಹೇಳಿದರು.



Join Whatsapp