ನಾವು ಕತ್ತಿಯಿಂದಲೇ ಉತ್ತರ ಕೊಡುತ್ತೇವೆ: ಸಿಟಿ ರವಿ ವಿವಾದಾತ್ಮಕ ಹೇಳಿಕೆ

Prasthutha|


- Advertisement -

ಮಂಗಳೂರು: ಬಿಸಿ ರೋಡಿನಲ್ಲಿ ಹಿಂದೂಳಿಗೆ ಸವಾಲು ಹಾಕಲಾಗಿದೆ. ಇದು ಹಿಂದೂಗಳಿಗಷ್ಟೇ ಅಲ್ಲ, ಭಾರತಕ್ಕೆ ಹಾಕಿದ ಸವಾಲು. ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇವೆ ಎಂದು ಸಿಟಿ ರವಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಮ್ಮ ಪೂರ್ವಜರು ಕತ್ತಿ ತೋರಿಸಿದಾಗ ಕತ್ತಿಯಿಂದಲೇ ಉತ್ತರ ಕೊಟ್ಟಿದ್ದರು. ಯುದ್ಧಕ್ಕೆ ಸವಾಲು ಹಾಕಿದಾಗ ಯುದ್ಧದ ಮೂಲಕವೇ ಗೆಲ್ಲಬೇಕು. ಸಲಹೆ ಎಲ್ಲಾ ಕೆಲಸ ಮಾಡಲ್ಲ. ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇವೆ. ಇಲ್ಲವಾದರೆ ನಮ್ಮ ದೇಶ ಬಾಂಗ್ಲಾದೇಶ, ಪಾಕಿಸ್ತಾನದಂತೆ ಆಗುತ್ತದೆ. ಅದಕ್ಕೆ ನಾವು ಅವಕಾಶ ಕೊಡಬಾರದು ಎಂದರು.

- Advertisement -

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ, ಗಲಭೆಯ ಹಿಂದೆ ಹೊರಗಿನ ಶಕ್ತಿ ಕೆಲಸ ಮಾಡಿದೆ ಎಂಬ ಅನುಮಾನ ನನಗಿತ್ತು. ಕೇರಳದವರ ಹೆಸರು ಬಹಿರಂಗವಾಗಿರುವುದರಿಂದ ಅದು ಸಾಬೀತಾಗಿದೆ. ನಾಗಮಂಗಲ ಗಲಭೆ ಪ್ರಕರಣದ ಸಂಪೂರ್ಣ ತನಿಖೆ ಎನ್‌ಐಗೆ ವಹಿಸಬೇಕು. ಮಂಡ್ಯದಲ್ಲಿ ಶೇ.90ರಷ್ಟು ಹಿಂದೂಗಳಿದ್ದಾರೆ. ನೀನು ಎಂದರೆ ನಿಮ್ಮಪ್ಪ ಅನ್ನುವ ಜನ ಇದ್ದಾರೆ. ಅಂತಹ ಕಡೆ ಇಂತಹ ಕೃತ್ಯ ಮಾಡಿರುವುದು ಪೂರ್ವ ನಿಯೋಜಿತ. ಇಲ್ಲಿ ಗಲಾಟೆ ಎಬ್ಬಿಸಿ ಭಯದ ವಾತಾವರಣ ನಿರ್ಮಾಣ ಮಾಡಬೇಕು, ಆತಂಕ ಸೃಷ್ಟಿ ಮಾಡಬೇಕು, ಗಲಭೆ ಮಾಡಿ ನಷ್ಟ ಉಂಟು ಮಾಡಬೇಕು ಎಂಬುದು ಅವರ ಉದ್ದೇಶವಾಗಿದೆ ಎಂದರು.



Join Whatsapp