ಹರಿಯಾಣ | ಬಿಜೆಪಿ ಪ್ರಣಾಳಿಕೆ ಬಿಡುಗಡೆ: ₹500ಕ್ಕೆ ಅಡುಗೆ ಅನಿಲ, 2 ಲಕ್ಷ ಉದ್ಯೋಗ ಭರವಸೆ

Prasthutha|

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷವು ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರೈತರು, ಮಹಿಳೆಯರು, ಯುವಕರಿಗೆ ಆದ್ಯತೆ ನೀಡುವ ಭರವಸೆ ನೀಡಿದೆ.

- Advertisement -


ರೋಹ್ಟಕ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಹರಿಯಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.


2 ಲಕ್ಷ ಸರ್ಕಾರಿ ಉದ್ಯೋಗ ಸೃಷ್ಟಿ, ಹರ್ ಘರ್ ಗೃಹಿಣಿ ಯೋಜನೆಯಡಿ ₹500ಕ್ಕೆ ಅಡುಗೆ ಅನಿಲ, ಕನಿಷ್ಠ ಬೆಂಬಲ ಬೆಲೆಯಲ್ಲಿ 24 ಬೆಳೆಗಳ ಖರೀದಿ, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 5 ಲಕ್ಷ ಮನೆಗಳ ನಿರ್ಮಾಣ, ಲಾಡೋ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹2,100 ಸಹಾಯಧನ ನೀಡುವುದಾಗಿಯೂ ಘೋಷಿಸಿದೆ.



Join Whatsapp