ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಇಬ್ಬರು ಕಾನ್ ಸ್ಟೆಬಲ್ ಗೆ ಗಾಯ

Prasthutha|

ಸ್ಥಳದಲ್ಲಿ ಬಿಗುವಿನ ವಾತಾವರಣ

- Advertisement -


ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಿರುವ ಘಟನೆ ಇಲ್ಲಿನ ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ ಸ್ಟೆಬಲ್ ಗಳಿಗೆ ಗಾಯವಾಗಿದೆ.


ಬೇತೂರು ರಸ್ತೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯು ರಾತ್ರಿ 7.30ರ ವೇಳೆಗೆ ವೆಂಕಟೇಶ್ವರ ದೇವಸ್ಥಾನದ ವೃತ್ತಕ್ಕೆ ಬಂದಾಗ ಕೆಲವರು ಘೋಷಣೆ ಕೂಗಿದ್ದರಿಂದ ಗಲಭೆ ಆರಂಭವಾಗಿದೆ. ಏಕಾಏಕಿ ಒಂದು ಗುಂಪಿನ ಮೇಲೆ ಕಲ್ಲು ತೂರಾಟ ನಡೆದಿದೆ.

- Advertisement -


ಬಂದೋಬಸ್ತ್ ಗೆ ನಿಯುಕ್ತರಾಗಿದ್ದ ಪೊಲೀಸ್ ಕಾನ್ ಸ್ಟೆಬಲ್ ಗಳಾದ ಅನ್ನಪೂರ್ಣಾ, ರಘು ಅವರಿಗೆ ಕಲ್ಲು ಬಡಿದು ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಸಂದರ್ಭ ಪೊಲೀಸ್ ಸಿಬ್ಬಂದಿ ಲಾಠಿ ಪ್ರಹಾರ ನಡೆಸುವ ಮೂಲಕ ಗುಂಪನ್ನು ಚದುರಿಸಿದರು.


ಗಲಭೆ ಆರಂಭವಾಗುತ್ತಿದ್ದಂತೆಯೇ ಅಂಗಡಿ– ಮುಂಗಟ್ಟುಗಳನ್ನು ಬಂದ್ ಮಾಡಿಸಲಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದರಿಂದ ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.



Join Whatsapp