ಶಿರೂರು ದುರಂತ: ಕಾರ್ಯಾಚರಣೆಯಲ್ಲಿ ಟ್ರಕ್ ಬಿಡಿಭಾಗಗಳು, ಸ್ಕೂಟಿ ಪತ್ತೆ..!

Prasthutha|

- Advertisement -

ಕಾರವಾರ: ಅಂಕೋಲಾ ಸಮೀಪದ ರಾಷ್ಟ್ರೀಯ ಹೆದ್ದಾರಿ ಶಿರೂರು ಬಳಿ ಗಂಗಾವಳಿ ನದಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ರವಿವಾರ ಟ್ರಕ್ ಬಿಡಿಭಾಗಗಳು, ಸ್ಕೂಟಿ ಪತ್ತೆಯಾಗಿವೆ.

ಕಾರ್ಯಾಚರಣೆ 80 ತಾಸು ,ಅಂದರೆ ಹತ್ತು ದಿವಸ ನಡೆಯಲಿದೆ. ಈ ಬಗ್ಗೆ ಸಂಶಯ ಬೇಡ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

- Advertisement -

ಶವಗಳ ಹುಡುಕಾಟ ಇನ್ನೂ ಎರಡು ದಿನ ನಡೆಯಲಿದೆ. ನಂತರ ನದಿಯ ಆಳಕ್ಕೆ ಹಾಗೂ ಇತರೆಡೆಗೆ ನದಿಗೆ ಬಿದ್ದ ಕಲ್ಲು ಮಣ್ಣು ತೆಗೆಯಲಾಗುವುದು. ಅಗತ್ಯ ಬಿದ್ದರೆ ಕಾರ್ಯಾಚರಣೆ ಸಮಯ ಹೆಚ್ಚಿಸಲಾಗುವುದು ಎಂದರು.

ಕೇರಳದ ಅರ್ಜುನ್ ಸಹೋದರಿ ಹೇಳಿದ ಕಡೆ ಕಾರ್ಯಾಚರಣೆ ನಡೆಯಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಹ ಕಾರ್ಯಾಚರಣೆ ಸ್ಥಳ ಕ್ಕೆ ಭೇಟಿ ನೀಡಿದರು. ಬಿಜೆಪಿ ಈ ಕಾರ್ಯಾಚರಣೆ ಬಗ್ಗೆ ಸುಳ್ಳು ಹಬ್ಬಿಸುತ್ತಿದೆ‌ . ಜನ ವದಂತಿ ನಂಬಬಾರದು ಎಂದರು. ಕಾರ್ಯಾಚರಣೆ ಮುಂದುವರಿಯಲಿದೆ ಎಂದರು.



Join Whatsapp