ಬಿಜೆಪಿಯಲ್ಲಿರುವ ಭ್ರಷ್ಟರ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ

Prasthutha|

ಮೈಸೂರು: ಬಿಜೆಪಿಯಲ್ಲೇ ಬಹಳ ಭ್ರಷ್ಟಾಚಾರಿಗಳಿದ್ದು, ಅವರ ಮೇಲೆ ಪ್ರಧಾನಿ ಮೋದಿಯವರು ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

- Advertisement -


ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಮೋದಿ ಅವರು ಪ್ರಸ್ತಾಪಿಸಿದ ಬಗ್ಗೆ ಇಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ; ಅಲ್ಲಿಗೆ ಭೇಟಿಯನ್ನೂ ನೀಡಲಿಲ್ಲವೇಕೆ ಎಂದು ಪ್ರಶ್ನಿಸಿದರು.


ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದರು.



Join Whatsapp