ಮಂಗಳೂರು: ನಾಳೆ ಪಡೀಲ್’ನಲ್ಲಿ ‘ಜನಪ್ರಿಯ’ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

Prasthutha|

ಮಂಗಳೂರು: ಪಡೀಲ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅದ್ಧೂರಿ ಉದ್ಘಾಟನಾ ಸಮಾರಂಭ ಹಾಗೂ ‘ಜನಪ್ರಿಯ ಸಮ್ಮಿಲನ’ ಕಾರ್ಯಕ್ರಮ ನಾಳೆ (ಸೆ.29) ರಂದು ನಡೆಯಲಿದೆ.

- Advertisement -


ಆಸ್ಪತ್ರೆಯನ್ನು ಸ್ಪೀಕರ್ ಯು.ಟಿ.ಖಾದರ್ ರವರು ಉದ್ಘಾಟಿಸಲಿದ್ದಾರೆ.


ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್ ರವರು ಬರ್ತ್ ಬ್ಲೂಮ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ.

- Advertisement -


ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಉಳಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp