ಈ ಬ್ಲ್ಯಾಕ್‌ಮೇಲರ್ ಹೇಗೆ ಲೂಟಿ ಮಾಡಿದ್ದಾನೆ ಅಂತಾ ಹೇಳಿದ್ದೀನಿ: ಎಡಿಜಿಪಿ ವಿರುದ್ಧ ಹೆಚ್‌ಡಿಕೆ ಕಿಡಿ

Prasthutha|

- Advertisement -

ಬೆಂಗಳೂರು: ಈ ರೀತಿಯ ಬ್ಲ್ಯಾಕ್‌ಮೇಲರ್ ಬೆಂಗಳೂರು ನಗರದ ಸುತ್ತ ಯಾರ ಜತೆ ಸೇರಿ ಯಾವ ರೀತಿ ಲೂಟಿ ಮಾಡಿದ್ದಾನೆ ಅಂತಾ ಹೇಳಿದ್ದೀನಿ, ಇದಕ್ಕೆ ದಾಖಲೆ ಇದೆ ಎಂದು ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾತನಾಡಿದ ಅವರು, ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಉತ್ತರ ಕೊಡಬೇಕು. ವಿಷ್ಯ ಕ್ರೋಢೀಕರಿಸದೇ ಮಾತಾಡಲ್ಲ ನಾನು. ಆ ಲೆಟರ್ ಚೆನ್ನಾಗಿ ಪ್ರಿಪೇರ್ ಮಾಡಿದ್ದಾರೆ. ನಿನ್ನೆ ಸಂಜೆ ಎಲ್ಲಿ ಹೋಗಿದ್ರು ಅವರು ಅದೂ ಗೊತ್ತಿದೆ. ಯಾವ ರೀತಿ ಲೆಟರ್ ರೆಡಿ ಮಾಡಬೇಕೋ ಆ ರೀತಿ ಮಾಡಿ ಬಿಟ್ಟಿದ್ದಾರೆ. ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೆ. ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರ‍್ಯಾರನ್ನು ಹಿಡಿದು ಇಲ್ಲಿಗೆ ಬಂದ್ರು ಅಂತಾ ಗೊತ್ತಿದೆ. ಅವರ ಬಗ್ಗೆ ಮಾತಾಡಿ ಅವರನ್ನು ಯಾಕೆ ದೊಡ್ಡವರಾಗಿ ಮಾಡಲಿ ಎಂದು ಕುಟುಕಿದ್ದಾರೆ.

- Advertisement -

ಈ ಥರದ ಭಾಷೆ ಬಳಕೆ ಅವರ ಸಂಸ್ಕೃತಿ ತೋರಿಸುತ್ತೆ. ಯರ‍್ಯಾರ ಜತೆ ಇವರ ಸಂಬಂಧ ಇದೆ ಗೊತ್ತಿಲ್ವಾ? ಒಬ್ಬ ಕೇಂದ್ರದ ಮಂತ್ರಿ ಜತೆ ಹೇಗೆ ಮಾತಾಡಬೇಕು ಇವರು? ಸರ್ಕಾರ ಮೆಚ್ಚಿಸಲು ಇಂಥ ಅಧಿಕಾರಿಗಳನ್ನು ಇಟ್ಕೊಂಡಿದ್ದಾರೆ. ದ್ವೇಷದ ರಾಜಕೀಯ ಅನ್ನೋದು ಸಿದ್ದರಾಮಯ್ಯ ಆಡಳಿತದಲ್ಲಿ ಎಲ್ಲಿಗೆ ಹೋಗಿದೆ ಎಂದು ಎಡಿಜಿಪಿ ವಿರುದ್ಧ ಕಿಡಿಕಾರಿದರು. ನನ್ನ ರಾಜೀನಾಮೆ ಕೇಳ್ತಿದ್ದಾರೆ ಸಿದ್ದರಾಮಯ್ಯ. ಅವರ ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕಾ? ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ್ಮೇಲೆ ರಾಜೀನಾಮೆ ಯಾಕೆ ಕೊಡಲಿ? ಸುಳ್ಳು ಹೇಳ್ತಿರೋದು ನಾನಲ್ಲ, ಸಿದ್ದರಾಮಯ್ಯ. ನನಗೂ ಅವರಿಗೂ ಇರುವ ವ್ಯತ್ಯಾಸ ಇಷ್ಟೇ. ನಾವು ದೇವರಿಗೆ ಹೆದರಿ ಜೀವನ ಮಾಡ್ತಿರೋರು ಎಂದು ಟಾಂಗ್ ಕೊಟ್ಟರು.



Join Whatsapp