ಮಂಗಳೂರು: ‘ಜನಪ್ರಿಯ ಮಲ್ಟಿಸ್ಪೆಷಾಲಿಟಿ’ ಆಸ್ಪತ್ರೆ ಉದ್ಘಾಟನೆ

Prasthutha|

ಮಂಗಳೂರು: ನಗರದ ಪಡೀಲ್-ಕೊಡಕ್ಕಲ್ ನಲ್ಲಿ ನಿರ್ಮಾಣಗೊಂಡಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರವಿವಾರ ಉದ್ಘಾಟನೆಗೊಂಡಿದೆ.

- Advertisement -


ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ. ನಮ್ಮೀ ಆಸ್ಪತ್ರೆಯಲ್ಲಿ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ತುರ್ತು ಪರಿಹಾರ ಒದಗಿಸಲು ನುರಿತ ವೈದ್ಯಕೀಯ ತಜ್ಞರು ಸಿದ್ದರಿದ್ದಾರೆ. 130 ಬೆಡ್ ವ್ಯವಸ್ಥೆಯನ್ನು ಹೊಂದಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಿನದ 24 ಗಂಟೆಯ ಸೇವೆಗಳು ಲಭ್ಯವಿದೆ ಎಂದರು.


ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಆಸ್ಪತ್ರೆಗಳನ್ನು ಸ್ಥಾಪಿಸಲು ಅದೆಷ್ಟು ಕಷ್ಟವಿದೆ ಎಂದು ಅದರ ಸ್ಥಾಪಕರಿಗೆ ಮಾತ್ರ ತಿಳಿದಿರುವ ವಿಚಾರ. ಆಸ್ಪತ್ರೆ ಸಹಿತ ಯಾವುದೇ ಉದ್ಯಮಗಳು ಸ್ಥಾಪನೆಯಾದಾಗ ಸ್ಥಳೀಯರು ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕಿದೆ. ಇದರಿಂದ ಪರೋಕ್ಷವಾಗಿ ಸ್ಥಳೀಯರಿಗೆ ಕೂಡಾ ಲಾಭವಿದೆ. ಇಲ್ಲಿನ ಜಮೀನಿನ ದರದಲ್ಲೂ ಹೆಚ್ಚಳವಾಗಲಿದೆ ಎಂದ ಯು.ಟಿ.ಖಾದರ್ ಈ ಆಸ್ಪತ್ರೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಚಿಕಿತ್ಸೆ ನೀಡಲು ಆಸ್ಪತ್ರೆಯ ಸ್ಥಾಪಕರು ಕಟಿಬದ್ಧರಾಗಿದ್ದಾರೆ. ಅಲ್ಲದೆ ಆಸ್ಪತ್ರೆಯ ಸ್ಥಾಪಕ ಡಾ. ಅಬ್ದುಲ್ ಬಶೀರ್ ಅವರ ಸಾಹಸಮಯ ಬದುಕು ಯುವ ವೈದ್ಯರಿಗೆ ಸ್ಫೂರ್ತಿಯಾಗಬಹುದು ಎಂದರು.

- Advertisement -


ಮುಖ್ಯ ಅತಿಥಿಗಳಾಗಿ ಹಾಸನ ಸಂಸದ ಶ್ರೇಯಸ್ ಪಾಟೀಲ್, ಶಾಸಕರಾದ ಅಶೋಕ್ ಕುಮಾರ್ ರೈ, ಎ.ಕೆ.ಎಂ.ಅಶ್ರಫ್, ಐವನ್ ಡಿಸೋಜ, ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹೀಂ, ರಾಜ್ಯದ ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ, ಎಸ್‌ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮಾಜಿ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಡಾ. ಯೂಸುಫ್ ಕುಂಬಳೆ, ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್, ಕಾಂಗ್ರೆಸ್ ಮುಖಂಡರಾದ ಎಂ.ಎಸ್.ಮುಹಮ್ಮದ್, ಎನ್.ಎಸ್.ಕರೀಂ, ಉದ್ಯಮಿ ಅಬ್ದುಲ್ಲಾ ಮಾದುಮೂಲೆ ಭಾಗವಹಿಸಿದ್ದರು.



Join Whatsapp