ಲೋಕಾಯುಕ್ತ ಎಡಿಜಿಪಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು

Prasthutha|

ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ.

- Advertisement -


ಚಂದ್ರಶೇಖರ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು ನೀಡಿದೆ.


ಜೆಡಿಎಸ್ ಶಾಸಕರು ಹಾಗೂ ಪರಿಷತ್ ಸದಸ್ಯರು ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ ಚಂದ್ರಶೇಖರ್ ವಿರುದ್ಧ ಸಿಎಸ್‌ ಗೆ ಸೋಮವಾರ ದೂರು ನೀಡಿದ್ದಾರೆ.

- Advertisement -

ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಸಿಎಸ್​​​ಗೆ ಜೆಡಿಎಸ್ ನಿಯೋಗ ಮನವಿ ಮಾಡಿದೆ.

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಬಿಜೆಪಿ ಆರೋಪಿಸಿದೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆಯುವ ನಂಬಿಕೆ ಇಲ್ಲ. ಸಿಬಿಐ ತನಿಖೆಯೇ ಆಗಬೇಕೆಂದು ಒತ್ತಾಯಿಸಲು ಬಿಜೆಪಿ ಮುಂದಾಗಿದೆ.



Join Whatsapp