ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ

Prasthutha|

ಮೈಸೂರು: ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ನಮಗೆ ಇಷ್ಟ ಇಲ್ಲ. ನಮ್ಮ ಅಣ್ಣನಿಗೆ ಆಗದೇ ಇರುವವರು ಹಗರಣ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಏನಾದರೂ ಮಾಡಿ ಕೆಡವಬೇಕೆಂದು ಹೀಗೆ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಅವರ ವಿರುದ್ಧ ಈ ರೀತಿಯ ಆರೋಪ ಮಾಡುತ್ತಿದ್ದಾರೆ. ಈಗ ಸೈಟ್ ಹಿಂದಕ್ಕೆ ಕೊಡುತ್ತಿದ್ದಾರೆ ಎಂದು ಹೇಳುತ್ತಾರೆ. ತಪ್ಪು ನಡೆದಿದೆಯೋ ಇಲ್ಲವೋ ಗೊತ್ತಿಲ್ಲ. ಪಾರ್ವತಮ್ಮ ಅವರಿಗೆ ಕುಂಕುಮ ರೂಪದಲ್ಲಿ ಜಮೀನು ಕೊಟ್ಟಿರೋದು ನಮಗೆ ಗೊತ್ತಿಲ್ಲ. ವಿಜಯನಗರದಲ್ಲಿ ಸೈಟ್ ಕೊಟ್ಟಿರೋದು ಗೊತ್ತಿಲ್ಲ ಎಂದರು.


ಸಿದ್ದರಾಮಯ್ಯ ಅವರಿಗೂ ಈ ವಿಚಾರ ಗೊತ್ತಿಲ್ಲ. ಈಗ ಅವರನ್ನು ರಾಜೀನಾಮೆ ಕೇಳಿದರೆ ಹೇಗೆ ಕೊಡೋಕೆ ಆಗುತ್ತೆ. 40 ವರ್ಷದಿಂದ ಸಿದ್ದರಾಮಯ್ಯ ಕೆಟ್ಟ ಹೆಸರು ತಗೊಂಡಿರಲಿಲ್ಲ. ಈಗ ಇವರು ಆರೋಪ ಮಾಡುತ್ತಿದ್ದಾರೆ. ನಮ್ಮ ಬಳಿ ಇರೋದು ಎಲ್ಲಾ ಪಿತ್ರಾರ್ಜಿತ ಆಸ್ತಿ. ನಾವು ಖರೀದಿ ಮಾಡಿದ ಜಮೀನು ಇಲ್ಲ. ಸಿದ್ದರಾಮಯ್ಯ ಅವರು ಈ ಬಗ್ಗೆ ನಮ್ಮ ಜೊತೆ ಏನೂ ಹೇಳಿಕೊಂಡಿಲ್ಲ. ಅವರು ನೊಂದಿದ್ದಾರೆ ಎಂದು ನಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬಾರದು ಎಂದು ತಿಳಿಸಿದರು.



Join Whatsapp