ಮೈಸೂರಿನಲ್ಲಿ ಗುಂಬಜ್ ಮಾದರಿಯಲ್ಲಿ ದಸರಾ ದೀಪಾಲಂಕಾರ: ಬಿಜೆಪಿ ಅಪಸ್ವರ

Prasthutha|

ಮೈಸೂರು: ಮೈಸೂರು ದಸರಾ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಗರದ ಎಲ್ಲಾ ರಸ್ತೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ.

- Advertisement -

ಕೆಲವು ಮುಖ್ಯರಸ್ತೆಗಳಲ್ಲಿ ಚಪ್ಪರದ ಮಾದರಿಗಳನ್ನು ನಿರ್ಮಿಸಿ, ಅವುಗಳ ಮೇಲೆ ವಿಶೇಷವಾದ ದೀಪಾಲಂಕಾರ ಮಾಡಲಾಗಿದೆ.

ಆದರೆ, ಸಯ್ಯಾಜಿರಾವ್ ರಸ್ತೆಯಲ್ಲಿ ಇದೇ ರೀತಿ ಹಾಕಲಾಗಿರುವ ಚಪ್ಪರವು ಗುಂಬಜ್ ಮಾದರಿಯಲ್ಲಿ ಕಾಣುತ್ತಿದೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

- Advertisement -

ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಈ ಚಪ್ಪರವನ್ನು ಕೂಡಲೇ ಬದಲಾಯಿಸಿ ಎಂದು ಸೂಚಿಸಿದ್ದಾರೆ. ಈ ಕುರಿತಂತೆ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿರುವ ಅವರು, ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ದೀಪಾಲಂಕಾರಕ್ಕಾಗಿ ನಿರ್ಮಿಸಲಾಗಿರುವ ಚಪ್ಪರವನ್ನು ಕೂಡಲೇ ಬದಲಾಯಿಸುವಂತೆ ಸೂಚಿಸಿದ್ದೇನೆಂದು ಅವರು ತಿಳಿಸಿದ್ದಾರೆ.



Join Whatsapp