ಸಂವಿಧಾನ ನಾಶಕ್ಕೆ ಬಿಜೆಪಿ-RSS ಯತ್ನ: ರಾಹುಲ್ ಗಾಂಧಿ

Prasthutha|

ಚಂಡೀಗಢ: ‘ಸಂವಿಧಾನ ನಾಶಪಡಿಸಲು ಬಿಜೆಪಿ-RSS ಯತ್ನಿಸುತ್ತಿದೆ’ ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.

- Advertisement -


ಹರಿಯಾಣದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಸಂವಿಧಾನದ ಪುಸ್ತಕವನ್ನು ಹಿಡಿದು ಮಾತನಾಡಿದ ರಾಹುಲ್, ‘ಇದು ನಿಮ್ಮೆಲ್ಲರ ಸಂವಿಧಾನವಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನ ಸಂವಿಧಾನವಾಗಿದೆ. ಇದು ನಿಮ್ಮನ್ನು ರಕ್ಷಿಸುತ್ತದೆ’ ಎಂದು ಪುನರುಚ್ಚರಿಸಿದ್ದಾರೆ.


‘ಆದರೆ ಡಾ. ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಅವರ ಈ ಸಂವಿಧಾನವನ್ನು ನಾಶಪಡಿಸಲು ಬಿಜೆಪಿ ಹಾಗೂ RSS ಯತ್ನಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement -


ಒಂದು ವೇಳೆ ಈ ಸಂವಿಧಾನ ನಾಶವಾದ್ದಲ್ಲಿ ದೇಶದ ಬಡ ಜನರ ಬಳಿ ಬೇರೆ ಏನೂ ಉಳಿಯುವುದಿಲ್ಲ. ಹಾಗಾಗಿ ಸಂವಿಧಾನವನ್ನು ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.



Join Whatsapp