ಉತ್ತರ ಪ್ರದೇಶ: ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ ಅಧಿಕಾರಿ ಅಮಾನತು

Prasthutha|

ಮಿರ್ಜಾಪುರ: ಮಿರ್ಜಾಪುರ ಜಿಲ್ಲೆಯ ವಿದ್ಯಾವಾಸಿನಿ ದೇವಾಲಯಕ್ಕೆ ಶೂ ಹಾಕಿಕೊಂಡು ಪ್ರವೇಶಿಸಿದ ಆರೋಪದಡಿ ಜಿಲ್ಲಾ ಕೃಷಿ ಅಭಿವೃದ್ಧಿ ಸಹಾಯಕ ಅಧಿಕಾರಿಯನ್ನು(ಎಡಿಒ) ಕೆಲಸದಿಂದ ಅಮಾನತು ಮಾಡಲಾಗಿದೆ.

- Advertisement -


ಉಪವಿಭಾಗಾಧಿಕಾರಿಯಾಗಿ ಆಗಿಯೂ ಕೆಲಸ ಮಾಡುತ್ತಿರುವ ಪ್ರತೀಕ್ ಕುಮಾರ್ ಸಿಂಗ್ ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ್ದನ್ನು ಶಾಸಕ ರತ್ನಾಕರ್ ಮಿಶ್ರಾ ಗಮನಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.


ಅಲ್ಲದೆ, ಅಧಿಕಾರಿಗೆ ಛೀಮಾರಿ ಹಾಕಿದ ಶಾಸಕರು, ದೇಗುಲದ ಆವರಣದಿಂದ ಹೊರಗೆ ಕಳುಹಿಸಿದ್ದಾರೆ.

- Advertisement -


ಘಟನೆಯ ಮಾಹಿತಿ ಬಂದ ಕೂಡಲೇ ಎಡಿಒ ಅಮಾನತಿಗೆ ಮಿರ್ಜಾಪುರ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಕೃಷಿ ಇಲಾಖೆಯ ಉಪ ಆಯುಕ್ತ ವಿಕಾಸ್ ಪಟೇಲ್ ಅವರು ಆದೇಶಿಸಿದ್ದಾರೆ.



Join Whatsapp