ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು ಮುಮ್ತಾಝ್ ಅಲಿ ಅಗಲುವಿಕೆಗೆ SDPI ಸಂತಾಪ

Prasthutha|

ಮಂಗಳೂರು: ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಮುಮ್ತಾಝ್ ಅಲಿ ಯವರು ಯಶಸ್ವಿ ಉದ್ಯಮಿ ಕೂಡ ಆಗಿದ್ದರು. ಮಂಗಳೂರಿನ ಯಾವುದೇ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಮುಂಚೂಣಿಯಲ್ಲಿ ನಿಂತು ನೇತೃತ್ವ ನೀಡುತ್ತಿದ್ದ ಇವರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸುವ ವ್ಯಕ್ತಿತ್ವವಾಗಿದ್ದರು. ಹಲವಾರು ಧಾರ್ಮಿಕ, ಸಾಮಾಜಿಕ ಶೈಕ್ಷಣಿಕ ಸಂಘ ಸಂಸ್ಥೆಗಳ ಬೆಳವಣಿಗೆಯಲ್ಲಿ ಇವರ ಪಾತ್ರ ಬಹಳ ದೊಡ್ಡದಾಗಿತ್ತು.

ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ಮೇರು ವ್ಯಕ್ತಿತ್ವದ ಮುಮ್ತಾಝ್ ರವರ ಅಗಲುವಿಕೆ ಸಮಾಜಕ್ಕೆ ಮತ್ತು ಸಮುದಾಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರ ಕುಟುಂಬ ಮತ್ತು ಬಂಧುಗಳಿಗೆ  ಮುಮ್ತಾಝ್ ರವರ  ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಅನ್ವರ್ ಸಾದತ್ ತನ್ನ ಸಂತಾಪವನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp