ವಿಧಾನ ಪರಿಷತ್ ಉಪ ಚುನಾವಣೆ: SDPI ಅಭ್ಯರ್ಥಿಯಿಂದ ಚುನಾಯಿತ ಜನಪ್ರತಿನಿಧಿಗಳ ಸಭೆ

Prasthutha|

- Advertisement -

ಬಂಟ್ವಾಳ: ವಿಧಾನ ಪರಿಷತ್ ಉಪ ಚುನಾವಣೆ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ರವರು ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ SDPI ಪಕ್ಷದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮವು ಮಂಗಳವಾರ ಬಿ ಸಿ ರೋಡ್ ಸಮೀಪದ ಗೂಡಿನಬಳಿಯ ಸಮುದಾಯ ಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ, ಚುನಾಯಿತ ಜನಪ್ರತಿನಿಧಿಗಳ ಉಸ್ತುವಾರಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ ಹಾಗೂ ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾಧ್ಯಕ್ಷರಾದ ನೌರಿನಾ ಆಲಂಪಾಡಿ ಉಪಸ್ಥಿತರಿದ್ದರು.

- Advertisement -

ಕಾರ್ಯಕ್ರಮದಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು, ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು



Join Whatsapp