ದುರ್ಗಾ ದೌಡು ಕಾರ್ಯಕ್ರಮದಲ್ಲಿ ಭಾಗವಹಿಸಿ ಕರ್ತವ್ಯ ಲೋಪ ಎಸಗಿದ ಪಿಎಸ್’ಐ ವಿರುದ್ಧ ಕ್ರಮ ಕೈಗೊಳ್ಳಿ: SDPI ಆಗ್ರಹ

Prasthutha|

ಬೆಂಗಳೂರು: ದುರ್ಗಾ ದೌಡು ಕಾರ್ಯಕ್ರಮದಲ್ಲಿ ಭಾಗವಹಿಸಿ ಕರ್ತವ್ಯ ಲೋಪ ಎಸಗಿದ ಪಿಎಸ್’ಐ ವಿರುದ್ಧ ಕ್ರಮ ಕೈಗೊಳ್ಳಿ ಎಂದು SDPI ಆಗ್ರಹಿಸಿದೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಪೊಲೀಸರು ನಮ್ಮ ಸಮಾಜದ ಒಂದು ಭಾಗ ಮತ್ತು ನ್ಯಾಯದ ಕ್ರಿಮಿನಲ್ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಏಕೆಂದರೆ ಪೊಲೀಸರು ಪ್ರಾಥಮಿಕವಾಗಿ ಶಾಂತಿಯ ನಿರ್ವಹಣೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಜಾರಿ ಮತ್ತು ವ್ಯಕ್ತಿ ಮತ್ತು ವ್ಯಕ್ತಿಗಳ ಆಸ್ತಿಯ ಭದ್ರತೆಗೆ ಕಾಳಜಿ ವಹಿಸುತ್ತಾರೆ. ಆದರೆ ಇದಕ್ಕೆ ಅಪವಾದ ಎಂಬಂತೆ ಬಾಗಲಕೋಟೆ ಜಿಲ್ಲೆಯ ಮುಧೋಳ್ ಠಾಣೆ ಪಿಎಸ್ ಐ ಪೊಲೀಸ್ ಇಲಾಖೆಯ ಸಮವಸ್ತ್ರ ಧರಿಸಿ ಸಂಘಪರಿವಾರದ ಧ್ವಜ ಹಿಡಿದು ಕೋಮು ದ್ವೇಷ ಹರಡುವ ದುರ್ಗಾದೌಡು ಕಾರ್ಯಕ್ರಮದಲ್ಲಿ ಭಾಗವಹಿಸಿ ಕರ್ತವ್ಯ ಲೋಪ ಎಸಗಿದ್ದು, ಇಂತಹ ಪೋಲೀಸರಿಂದ ಇಡೀ ಪೋಲೀಸ್ ಇಲಾಖೆಗೆ ಕಳಂಕವಾಗುವ ಸಾಧ್ಯತೆ ಇದೆ ಹಾಗಾಗಿ ತಕ್ಷಣ ಶಿಸ್ತು ಕ್ರಮ ಕೈಗೊಂಡು ಇಂತಹ ಪೋಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಮಾನವಕುಲಕ್ಕೆ ಸೇವೆ ಸಲ್ಲಿಸುವುದು, ಅಪರಾಧವನ್ನು ತಡೆಗಟ್ಟುವುದು, ಮಾನವ ಹಕ್ಕುಗಳನ್ನು ಎತ್ತಿಹಿಡಿಯುವುದು ಮಾತ್ರವಲ್ಲದೇ ಕೋಮು ಸೌಹಾರ್ದತೆಗಾಗಿ ಕೆಲಸ ಮಾಡುವುದು ಕೂಡ ಪೊಲೀಸ್ ಅಧಿಕಾರಿಗಳ ಪ್ರಾಥಮಿಕ ಕರ್ತವ್ಯವಾಗಿದೆ. ಆದರೆ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ, ಪೊಲೀಸ್ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸರಿಯಾದ ರೀತಿಯಲ್ಲಿ ಕೈಗೊಳ್ಳುವುದಿಲ್ಲ ಮತ್ತು ವೈಯಕ್ತಿಕ ಅಥವಾ ಅಧಿಕೃತ ಲಾಭಕ್ಕಾಗಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಸುಪ್ರೀಂ ಕೋರ್ಟ್ ಸರಣಿ ತೀರ್ಪುಗಳಲ್ಲಿ ಪೊಲೀಸರ ದುರ್ವರ್ತನೆ ಅಥವಾ ಅಧಿಕಾರದ ದುರುಪಯೋಗಕ್ಕೆ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಿದೆ ಎಂದು ತಿಳಿಸಿದ್ದಾರೆ.



Join Whatsapp