ಲಾಡ್ಜ್​ನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್​ ಅನುಮಾನಾಸ್ಪದ ಸಾವು

Prasthutha|

ಬೆಂಗಳೂರು: ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

- Advertisement -

ಜಕ್ಕಣ್ಣಗೌಡರ ಮೃತ ತಹಶೀಲ್ದಾರ್.

ಜಕ್ಕಣ್ಣಗೌಡ ಅವರು ಕೋರ್ಟ್​ ಕೆಲಸಕ್ಕೆಂದು ಬೆಂಗಳೂರಿಗೆ ಆಗಮಿಸಿ ಕಪಾಲಿ‌ ಥಿಯೇಟರ್ ಸಮೀಪದ ವೈಭವ್ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ಇಂದು (ಅಕ್ಟೋಬರ್ 16) ರಾತ್ರಿ 9ರ ಸುಮಾರಿಗೆ ಅವರು ರೂಮ್​ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಒಂದೆಡೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದರೆ ಮತ್ತೊಂದೆಡೆ ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.

- Advertisement -

ಇನ್ನು ತೀರ್ಥಹಳ್ಳಿಯ ಹಶೀಲ್ದಾರ್ ಜಕ್ಕಣ್ಣಗೌಡರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿದ್ದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಕೂಡಲೇ ಲಾಡ್ಜ್​ ಆಗಮಿಸಿದ್ದಾರೆ. ಹಾಗೇ ಸ್ಥಳಕ್ಕೆ ಇನ್ನು ಉಪ್ಪಾರ ಪೇಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಸಾವಿನ ಸತ್ಯಾಸತ್ಯತೆ ತಿಳಿಯಲಿದೆ.



Join Whatsapp