ಕಾಲುವೆಯಲ್ಲಿ ಜಾರಿ ಬಿದ್ದು ಕೊಚ್ಚಿ ಹೋದ ಬಾಲಕನ ಮೃತದೇಹ ಪತ್ತೆ

Prasthutha|

ಹಾವೇರಿ: 12 ವರ್ಷದ ಬಾಲಕನೋರ್ವ ಮಳೆ ನೀರಿಗೆ ಚರಂಡಿಯಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಜಾರಿ ಕಾಲಿವೆಯಲ್ಲಿ ಬಿದ್ದಿದ್ದ ಬಾಲಕ ನಿವೇದನ ಗುಡಗೇರಿ ಮೃತದೇಹ ಪತ್ತೆಯಾಗಿದೆ.

- Advertisement -


ಅಗ್ನಿಶಾಮಕ ಸಿಬ್ಬಂದಿ ಕಾಲುವೆಯಿಂದ ಬಾಲಕನನ್ನು ಪತ್ತೆ ಹಚ್ಚಿದ್ದು, ಬಾಲಕನ ಶವವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಗಿದೆ. ಮೃತ ಬಾಲಕನ ಪಾಲಕರು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


ವೇದು ಗುಡಗೇರಿ ಮೃತ ಬಾಲಕ. ಶಿವಾಜಿನಗರದ ನಿವಾಸಿ ಎಂದು ತಿಳಿದುಬಂದಿದೆ. ರಭಸವಾಗಿ ಹರಿಯುತ್ತಿದ್ದ ರಾಜಕಾಲುವೆಯ ನೀರಿನಲ್ಲಿ ಈತ ಕೊಚ್ಚಿ ಹೋಗಿದ್ದಾನೆ. ಸದ್ಯ ಕಣ್ಮರೆಯಾದ ಬಾಲಕನ ಮೃತದೇಹ ಪತ್ತೆಯಾಗಿದೆ.



Join Whatsapp