ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್​ ವಿರುದ್ಧ ದೂರು

Prasthutha|

- Advertisement -

ವಿಜಯಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್​ ವಿರುದ್ಧ ಅವಾಚ್ಯ ಪದಬಳಸಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ದೂರು ನೀಡಿದ್ದಾರೆ.

ಅಕ್ಟೋಬರ್​ 15 ವಿಜಯಪುರದ ಸಿದ್ದೇಶ್ವರ ಗುಡಿ ಹತ್ತಿರ ನಡೆದ “ವಕ್ಫ್​ ಹಠಾವೋ ದೇಶ ಬಚಾವೋ” ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಭರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್​ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಮುಸ್ಲಿಂ ಧರ್ಮಕ್ಕೆ ನಿಂದನೆ ಮಾಡಿದ್ದಾರೆ

- Advertisement -

ಜೊತೆಗೆ ನಗರದ ಶಾಂತಿ ನಗರದ ಶಾಂತಿ ಸೌಹಾರ್ಧವನ್ನು ಕೆಡಿಸುವ ದುರುದ್ದೇಶದಿಂದ ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹಿಯ್ಯಾಳಿಸಿ ಮಾತನಾಡಿ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಎಲ್ಲರಿಗೂ ಮಾನಸಿಕ ನೋವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ​ ಭಾರತೀಯ ನ್ಯಾಯ ಸಂಹಿತೆ 2023 ರ (U/s-352,353(2)) ಕಲಂ ಅಡಿ ದೂರು ದಾಖಲಿಸಿದ್ದಾರೆ.



Join Whatsapp