ಲಾರೆನ್ಸ್ ಬಿಷ್ಣೋಯಿ ಹತ್ಯೆ ಮಾಡಿದರೆ 1.11 ಕೋಟಿ ಬಹುಮಾನ: ಕರ್ಣಿ ಸೇನೆ ಘೋಷಣೆ

Prasthutha|

ಜೈಪುರ: ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿಯನ್ನು ಹತ್ಯೆ ಮಾಡಿದರೆ 1.11 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಘೋಷಣೆ ಮಾಡಿದೆ.

- Advertisement -

ಈ ಬಗ್ಗೆ ಕ್ಷತ್ರಿಯ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ರಾಜ ಶೇಖಾವತ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಷ್ಣೋಯಿಯನ್ನು ಹತ್ಯೆ ಮಾಡುವ ಪೊಲೀಸ್ ಅಧಿಕಾರಿಗೆ 1,11,11,111 ರೂಪಾಯಿ ಬಹುಮಾನ ನೀಡುತ್ತೇನೆ ಎಂದು‌ ಹೇಳಿದ್ದಾರೆ.

ತಮ್ಮ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಲಾರೆನ್ಸ್ ಬಿಷ್ಣೋಯಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆಮಾಡುವ ಭದ್ರತಾ ಪಡೆಯ ಯಾವುದೇ ಸಿಬ್ಬಂದಿಗೆ ಈ ಬಹುಮಾನ ನೀಡುವುದಾಗಿ ಹೇಳಿದ್ದಾರೆ.



Join Whatsapp