ಒಡಿಶಾದಲ್ಲಿ ಚಂಡಮಾರುತ: 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳ ಸ್ಥಾಪನೆ

Prasthutha|

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೀವ್ರ ಚಂಡಮಾರುತ ರೂಪಗೊಳ್ಳುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ.

- Advertisement -


ಗಾಳಿ ವೇಗವಾಗಿ ಬೀಸುತ್ತಿದ್ದು ಮಾರುತಗಳು ಪೂರ್ವ ಕರಾವಳಿಯ ಕಡೆಗೆ ಚಲಿಸುತ್ತಿರುವುದರಿಂದ ಒಡಿಶಾದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಈಗಾಗಲೇ ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು 250 ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ್ದು ನೌಕರರಿಗೆ ಅಗತ್ಯ ಸೂಚನೆಗಳನ್ನು ಕೊಟ್ಟಿದ್ದಾರೆ.

- Advertisement -


ಸ್ಥಳಾಂತರಗೊಳ್ಳುವ ಜನರಿಗೆ ಹಾಗೂ ಪರಿಹಾರ ಕೇಂದ್ರಗಳಲ್ಲಿ ಇರುವವರಿಗೆ ಆಹಾರ, ನೀರು, ಔಷಧಿ, ವಿದ್ಯುತ್ ಮತ್ತು ಇತರ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.



Join Whatsapp