ಜಾರ್ಖಂಡ್ | ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್ ಗೆ ರಾಮ, ಕೃಷ್ಣನ ಹೆಸರು: ಹಿಮಂತ ಶರ್ಮಾ

Prasthutha|

ಜಾರ್ಖಂಡ್: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್ ಉಪ–ವಿಭಾಗವನ್ನು ಜಿಲ್ಲೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಅಲ್ಲದೆ, ಹೊಸ ಜಿಲ್ಲೆಗೆ ರಾಮ ಅಥವಾ ಕೃಷ್ಣನ ಹೆಸರಿಡಲಾಗುವುದು ಎಂದು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಸಹ ಉಸ್ತುವಾರಿಯೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

- Advertisement -


ಅಲ್ಲದೆ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಿಂದ ಅಕ್ರಮ ವಲಸಿಗರನ್ನು ಹೊರದಬ್ಬಲಾಗುವುದು ಎಂದಿದ್ದಾರೆ.


ಪಲಾಮು ಜಿಲ್ಲೆಯ ಜಾಪ್ಲಾ ಮೈದಾನದಲ್ಲಿ ನಡೆದ ಚುನಾವಣಾ ಸಮಾವೇಶದದಲ್ಲಿ ಅವರು ಹುಸೈನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಮಲೇಶ್ ಸಿಂಗ್ ಪರ ಮತಯಾಚನೆ ನಡೆಸಿದರು.
‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಹುಸೈನಾಬಾದ್ ಅನ್ನು ಜಿಲ್ಲೆಯನ್ನಾಗಿ ಮಾಡಲಾಗುವುದು. ಅದಕ್ಕೆ ರಾಮ ಅಥವಾ ಕೃಷ್ಣನ ಹೆಸರು ಇಡಲಾಗುವುದು’ ಎಂದು ಹೇಳಿದ್ದಾರೆ.



Join Whatsapp