ಸಿ.ಪಿ.ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ, ಅವನೊಬ್ಬ ಫ್ರಾಡ್: ವಿಶ್ವನಾಥ್

Prasthutha|

ಬೆಂಗಳೂರು: ಮಾಜಿ ಎಂಎಲ್ ಸಿ ಯೋಗೇಶ್ವರ್ ನನ್ನು ಸೈನಿಕ ಅಂತಾ ಕರೆಯಬಾರದು. ಸಿ.ಪಿ.ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ, ಅವನೊಬ್ಬ ಫ್ರಾಡ್ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

- Advertisement -


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷದವರೂ ಕರೆಯುತ್ತಿದ್ದಾರೆ. ಅವನೊಬ್ಬ ದೊಡ್ಡ ಲೀಡರ್ ಅಂತಾ ಎಲ್ಲರೂ ಕರೆಯುತ್ತಿದ್ದೀರಾ? ಸಿಎಂ ಅವರೇ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಏಕೆ ಹಾಳು ಮಾಡ್ತಿದ್ದೀರಿ? ಸರ್ಕಾರ ಈಗಾಗಲೇ ಮುಡಾ, ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಲುಕಿದೆ ಇದರ ನಡುವೆ ಇನ್ನೊಬ್ಬ ಫ್ರಾಡ್ ಸೇರಿಸಿಕೊಂಡಿದ್ದೀರಿ ಎಂದಿದ್ದಾರೆ.


ನಾನು ಕೂಡ ಮೂರು ಪಾರ್ಟಿಗಳಲ್ಲಿ ಗುರುತಿಸಿಕೊಂಡಿದ್ದೇನೆ. ಆದರೆ ನನ್ನ ತತ್ವ ಸಿದ್ಧಾಂತ ಬಿಟ್ಟಿಲ್ಲ, ಜಂಡಾ ಬಿಟ್ಟರೂ ಅಜೆಂಡಾ ಬಿಟ್ಟಿಲ್ಲ. ಇತ್ತೀಚೆಗೆ ಪಕ್ಷ ರಾಜಕಾರಣ ಬದಲು ವ್ಯಕ್ತಿ ರಾಜಕಾರಣ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಅನ್ನೋದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -


ನಿನ್ನೆ ನಡೆದಿದ್ದು 500 ಕೋಟಿ ರೂ. ಶಿಲಾನ್ಯಾಸ ಕಾರ್ಯಕ್ರಮವೋ ಅಥವಾ ನಾನು ಸತ್ಯವಂತ ಅಂತಾ ಹೇಳಿಕೊಳ್ಳುವ ಕಾರ್ಯಕ್ರಮವೋ? ನೀವು ಎಷ್ಟೇ ಹೇಳಿದರೂ ಸಿದ್ದರಾಮಯ್ಯ ಭ್ರಷ್ಟ ಅಂತ ಜನ ನಿರ್ಧರಿಸಿದ್ದಾರೆ. ಮನೆ ಇಲ್ಲ ಮರಿಸ್ವಾಮಿ ಮನೇಲಿ ಮಲಗುತ್ತೇನೆ ಎನ್ನುತ್ತೇನೆ ಎಂದರೆ ಜನ ನಂಬಲ. ಸಿದ್ದರಾಮಯ್ಯ ಭ್ರಷ್ಟ ಅಂತಾ ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.



Join Whatsapp