NCP ಸೇರ್ಪಡೆಯಾದ ಬಾಬಾ ಸಿದ್ದೀಕಿ ಪುತ್ರ ಜೀಶನ್: ಬಾಂದ್ರಾ ಪೂರ್ವದಿಂದ ಕಣಕ್ಕೆ

Prasthutha|

ಮುಂಬೈ: ಈಚೆಗೆ ಹತ್ಯೆಗೀಡಾದ ಎನ್ ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಅವರು ಇಂದು (ಶುಕ್ರವಾರ) ಅಜಿತ್ ಪವಾರ್ ನೇತೃತ್ವದ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದಾರೆ.

- Advertisement -


ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.


ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

- Advertisement -


ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.



Join Whatsapp