ಚನ್ನಪಟ್ಟಣ ಉಪಚುನಾವಣೆ: ಶಕ್ತಿ ಪ್ರದರ್ಶನದ ಮೂಲಕದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Prasthutha|

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

- Advertisement -

ಗುರುವಾರವಷ್ಟೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದರು. ಇದೀಗ ಎನ್ ಡಿಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯೊಂದಿಗೆ ಚನ್ನಪಟ್ಟಣದ ಚುನಾವಣಾ ಅಖಾಡ ರಂಗೇರಿದೆ.


ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಳಿಕ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

- Advertisement -


ನಾಮಪತ್ರ ಸಲ್ಲಿಕೆಗೆ ಮುನ್ನ ನಿಖಿಲ್ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಚನ್ನಪಟ್ಟಣ ಕೆಂಗಲ್ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಮಾಡಿಸಿದ್ದಾರೆ. ಇನ್ನು ಮೊಮ್ಮಗನಿಗೆ ಒಳ್ಳೆಯದಾಗಲಿ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಪ್ರಾರ್ಥನೆ ಸಲ್ಲಿಸಿದ್ದಾರೆ.



Join Whatsapp