ವೈದ್ಯನ ಸೋಗಿನಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಹಣ್ಣಿನ ವ್ಯಾಪಾರಿ!

Prasthutha|

ನಾಗ್ಪುರ: ವೈದ್ಯನ ಸೋಗಿನಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಣ್ಣಿನ ವ್ಯಾಪಾರಿಯೊಬ್ಬನನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತನನ್ನು ನಾಗ್ಪುರದ ಕಾಮತಿ ಪ್ರದೇಶದ ಚಂದನ್ ನರೇಶ್ ಚೌಧರಿ ಎಂದು ಗುರುತಿಸಲಾಗಿದೆ.  ಹಣ್ಣು ಮತ್ತು ಐಸ್ ಕ್ರೀಮ್ ವ್ಯಾಪಾರ ಮಾಡುತ್ತಿದ್ದ ಈತ ನಂತರ ಇಲೆಕ್ಟ್ರೀಷಿಯನ್ ಆಗಿಯೂ ಕೆಲಸ ಮಾಡುತ್ತಿದ್ದ.

ಈತ ಓಂ ನಾರಾಯಣ ವಿವಿದೋದ್ಧೇಶ ಸಮಾಜ ಎಂಬ ದತ್ತಿ ಔಷಧಾಲಯವನ್ನೂ ನಡಸುತ್ತಿದ್ದು, ಕಳೆದ ಐದು ವರ್ಷಗಳಿಂದ ಆಯುರ್ವೇದ ಪ್ರಕೃತಿ ಚಿಕಿತ್ಸೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಆತನ ಪರಿಚಯಸ್ಥ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದ್ದು, ಮಾಹಿತಿ ಪಡೆದ ಪೊಲೀಸರು ಚಂದನ್ ನರೇಶ್ ಚೌಧರಿಯ ಔಷಧಾಲಯಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ, ಈತ ನಕಲಿ ವೈದ್ಯ ಎಂದು ಸಾಬೀತಾಗಿದೆ.

ಆತನ ಔಷಧಾಲಯದಿಂದ ಆಮ್ಲಜನಕ ಸಿಲಿಂಡರ್‌ಗಳು, ಸಿರಿಂಜುಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Join Whatsapp