ಜನಸೇವೆಗೆ ಅನುಮತಿ ನೀಡಲಿ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ : ಡಿ.ಕೆ ಶಿವಕುಮಾರ್

Prasthutha|

ಬೆಂಗಳೂರು: ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

- Advertisement -

ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ.  ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಲಸಿಕೆಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೇಳಿದ್ದಾರೆ.

ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಶಾಸಕರ ನಿಧಿ 2 ಕೋಟಿ ರುಪಾಯಿಯಲ್ಲಿ ಶೇ.25 ರಷ್ಟು ಅನುದಾನ ಬಳಸಿಕೊಳ್ಳಲು ಸರ್ಕಾರ ಹೇಳಿದೆ. ಹಾಸಿಗೆ, ವೆಂಟಿಲೇಟರ್ ಖರೀದಿಗೆ ಬಳಸಲು ಅನುಮತಿ ಇದೆ. ಹೀಗಾಗಿ ನಾವು 100 ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಿ, ಸರ್ಕಾರದ ಅನುಮತಿ ಕೋರಿದ್ದೇವೆ ಎಂದಿದ್ದಾರೆ.

- Advertisement -

ನಮ್ಮಲ್ಲಿ ಒಟ್ಟು 93 ಶಾಸಕರು ಹಾಗೂ ಪರಿಷತ್ ಸದಸ್ಯರಿದ್ದು, ಉಳಿದ ಮೊತ್ತವನ್ನು ನಮ್ಮ ಕಾರ್ಯಕರ್ತರ ಬಳಿ ಭಿಕ್ಷೆ ಎತ್ತಿಯಾದರೂ ಸಂಗ್ರಹಿಸುತ್ತೇವೆ. ಈ ಜನಪರ ಕೆಲಸಕ್ಕೆ ಸರ್ಕಾರ ಅನುಮತಿ ನೀಡಲಿ. ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ ಎಂದು ಅವರು ಒತ್ತಾಯಿಸಿದ್ದಾರೆ.

Join Whatsapp