ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿ.ಟಿ.ರವಿ ಆಗ್ರಹ

Prasthutha|

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರನ್ನು ‘ಅನ್ನಪೂರ್ಣೇಶ್ವರಿ’ ಕ್ಯಾಂಟೀನ್ ಎಂದು ಬದಲಿಸಲು ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಶೀಘ್ರದಲ್ಲೇ ಕ್ಯಾಂಟೀನ್ ಹೆಸರನ್ನು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.

- Advertisement -

ಬಡವರ ಹಸಿವು ನೀಗಿಸಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಈ ಕ್ಯಾಂಟೀನ್ ಬಡವರಿಗೆ, ನಿರ್ಗತಕರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಕ್ಯಾಂಟೀನ್​ ಗೆ ಇಡಲಾಗಿದೆ. ಆದರೆ ಈ ಹೆಸರನ್ನು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.



Join Whatsapp