ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಕಾಲಿಗೆ ಗುಂಡು ಹಾರಿಸಿ ರೌಡಿ ಶೀಟರ್ ಅರೆಸ್ಟ್

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ಕಾಲಿಗೆ ಗುಂಡು ಹಾರಿಸಿ ರೌಡಿ ಶೀಟರ್ ಅವಿನಾಶ್ ನನ್ನು ಸಂಜಯ್ ನಗರ ಪೊಲೀಸರು ಬಂಧಿಸಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ರಾಮಮೂರ್ತಿ ನಗರ ನಿವಾಸಿಯಾದ ರೌಡಿಶೀಟರ್ ಅವಿನಾಶ್, ಸಂಜಯ್ ನಗರ ಪೊಲೀಸ್​ ಠಾಣೆ ಸಿಬ್ಬಂದಿ ಸಂತೋಷ್ ಎಂಬುವರ ಮೇಲೆ ಹಲ್ಲೆ ನೆಡೆಸಿದ್ದ. ಈ ಹಿನ್ನೆಲೆಯಲ್ಲಿ ಸಂಜಯ್ ನಗರ ಠಾಣೆ ಇನ್ಸ್​ಪೆಕ್ಟರ್ ಬಾಲ್​ ರಾಜ್ ನೇತೃತ್ವದಲ್ಲಿ ಪೊಲೀಸರು ಬೆಳಗ್ಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಅಲ್ಲದೆ, ಈ ಹಿಂದೆ ಕೂಡ ಮುನಿರಾಜು ಎಂಬಾತ ತನ್ನ ಹೆಂಡತಿ ಮಗುವಿನೊಂದಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ತೆರಳುತ್ತಿದ್ದಾಗ ಅವಿನಾಶ್​ ಮತ್ತು ತಂಡ ಹಲ್ಲೆ ಮಾಡಿದ್ದರು. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp