ಬೀದರ್‌: ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಘೇರಾವ್ ಹಾಕಿದ ದಲಿತ ಸಂಘಟನೆಗಳು

Prasthutha|

ಬೀದರ್: ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ತಹಶೀಲ್ದಾರ್ ಕೀರ್ತಿ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊ‍ಳ್ಳುವಂತೆ ಒತ್ತಾಯಿಸಿ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ದಲಿತ ಸಂಘಟನೆಗಳು ಘೇರಾವ್ ಹಾಕಿದೆ.

- Advertisement -

ಮೇಲ್ವರ್ಗದವರು ಪರಿಶಿಷ್ಟ ಜಾತಿಗಳಾದ ಬೇಡಜಂಗಮ, ಮಾಲಜಂಗಮ, ಬೋವಿ ಜನಾಂಗದ ಪದ ಬಳಸಿ ಕಾನೂನು ಬಾಹಿರವಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆ ಸ್ಪರ್ಧೆ ಮಾಡಿ, ಗೆದ್ದು ಅಧಿಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಈ ವೇಳೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎದುರೆ ಜಿಲ್ಲಾಧಿಕಾರಿ- ಸಂಘಟನೆ ಕಾರ್ಯಕರ್ತರ ಮಧ್ಯ ಮಾತಿನ ಚಕಮಕಿ ನಡೆಯಿತು. ದಲಿತ ಸಂಘಟನೆಗಳ ಮನವಿಗೆ ಸ್ಪಂದಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Join Whatsapp