ದೊಡ್ಡ ಮಕ್ಕಳು ಶಾಲೆಗೆ ಬರುತ್ತಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿಯುತ್ತಿಲ್ಲ: ಸಚಿವ ಬಿ.ಸಿ.ನಾಗೇಶ್

Prasthutha|

ಬೆಂಗಳೂರು: ಶಾಲೆ ಆರಂಭಿಸುವ ಎಲ್ಲಾ ಪ್ರಯತ್ನ ದಲ್ಲೂ ನಾವು ಸಕ್ಸಸ್ ಆಗಿದ್ದೇವೆ. ಶೇ. 20 ರಷ್ಟು ಇನ್ನು ಸಕ್ಸಸ್ ಆಗಿಲ್ಲ, ಅದನ್ನು ಪೂರ್ಣಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಉತ್ತಮವಾಗಿದೆ. ನಾನು ಭೇಟಿ ನೀಡಿದ ಎರಡು ಶಾಲೆಗಳಲ್ಲೂ 504 ಮಕ್ಕಳ ಹಾಜರಾತಿ ಇತ್ತು. ಉತ್ತಮ ಪ್ರತಿಕ್ರಿಯೆ ಇದೆ ಎಂದು ಹರ್ಷ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆಯ ಜೊತೆ ಆರ್ ಡಿ ಪಿ ಆರ್ ಇಲಾಖೆಯ ಸಿಬ್ಬಂದಿಯನ್ನು ಬಳಸಿಕೊಂಡು ಮಕ್ಕಳನ್ನು ಶಾಲೆಗೆ ಕರೆ ತರುವ ಪ್ರಯತ್ನ ಮಾಡ್ತಿದ್ದೇವೆ. ಮನೆ ಮನೆಗೆ ಹೋಗಿ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸ ಮಾಡುತ್ತಿದ್ದೇವೆ. ಹಲವು ಮಕ್ಕಳನ್ನು ಶಾಲೆಗೆ ಕರೆತರಲು ಯಶಸ್ವಿಯಾಗಿದ್ದೇವೆ. ದೊಡ್ಡ ಮಕ್ಕಳು ಶಾಲೆಗೆ ಬರುತ್ತಿಲ್ಲ, ಎಲ್ಲಿ ಹೋಗಿದ್ದಾರೆ ಎಂದು ತಿಳಿಯುತ್ತಿಲ್ಲ, ಅವರನ್ನ ಹುಡುಕಿ ಕರೆತರುವ ಪ್ರಯತ್ನ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.


ಚಿಕ್ಕಮಗಳೂರಿನಲ್ಲಿ145 ಮಕ್ಕಳು ಹೊರಗುಳಿದಿದ್ದು, 102 ಮಕ್ಕಳನ್ನ ಕರೆತಂದಿದ್ದೇವೆ. ಸೇವ್ ದ ಚಿಲ್ಡ್ರನ್ಸ್ ಸಂಸ್ಥೆಯಿಂದ ಒಳ್ಳಯ ಪ್ರಯತ್ನ ನಡೆಯುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಯ ಬಳಿಯೇ ಶಾಲೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಂಚಾರಿ ಕಲಿಕಾ ಬಸ್ ಮೂಲಕ ಮಕ್ಕಳ ಕಲಿಕೆಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

- Advertisement -


ಪ್ರೈಮರಿಯಲ್ಲಿ ಶಿಕ್ಷಕರ ಕೊರತೆ ಯಿಲ್ಲ, 6 ರಿಂದ8 ನೇ ತರಗತಿ ವರೆಗಿನ ತರಗತಿಗಳಲ್ಲಿ ಕೊರತೆ ಇದೆ. ಅದನ್ನು ತುಂಬುವ ಕೆಲಸ ಮಾಡುತ್ತೇವೆ. 1 ರಿಂದ 5 ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ ಎಲ್ ಕೆ ಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದರು.



Join Whatsapp