ಹಿಂದೂಗಳಿಗೆ ಅಯೋಧ್ಯೆ, ಮುಸ್ಲಿಮರಿಗೆ ಅಜ್ಮೀರ್ ಷರೀಫ್ ಗೆ ಉಚಿತ ಯಾತ್ರೆ: ಕೇಜ್ರಿವಾಲ್

Prasthutha|

►ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ ಉಚಿತ ಪ್ರವಾಸ ವ್ಯವಸ್ಥೆ

- Advertisement -

ಪಣಜಿ: ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ, ಹಿಂದೂಗಳಿಗೆ ಅಯೋಧ್ಯೆಗೆ ಮತ್ತು ಮುಸ್ಲಿಮರಿಗೆ ಅಜ್ಮೀರ್ ಷರೀಫ್ ಹಾಗೂ ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ ಉಚಿತ ಯಾತ್ರೆಯನ್ನು ಏರ್ಪಡಿಸುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.


ಈ ಕುರಿತು ಮಾತನಾಡಿದ ಅವರು, ನಮ್ಮ ಜೀವನದಲ್ಲಿ ಧಾರ್ಮಿಕ ಕ್ಷೇತ್ರ ಹಾಗೂ ತೀರ್ಥ ಕ್ಷೇತ್ರಗಳಿಗೆ ಮಹತ್ವದ ಸ್ಥಾನವಿದೆ. ಕೇವಲ ದೇವರ ಆಶೀರ್ವಾದದಿಂದಲೇ ನಮಗೆ ಹೊಸ ಬೆಳಕು ಮತ್ತು ಹೊಸ ಮಾರ್ಗ ಲಭಿಸುತ್ತದೆ ಎಂದು ಹೇಳಿದ್ದಾರೆ.

- Advertisement -


ಕಳೆದ ಕೆಲವು ದಿನಗಳಲ್ಲಿ ಕೇಜ್ರಿವಾಲ್ ಗೋವಾದಲ್ಲಿ ಭರ್ಜರಿ ಚುನಾವಣಾ ಸಿದ್ಧತೆಗಳನ್ನು ನಡೆಸುತ್ತಿದ್ದು, ಹಲವು ಭರವಸೆಗಳನ್ನು ನೀಡುತ್ತಿದ್ದಾರೆ.



Join Whatsapp