ಪುನೀತ್ ನಿಧನದ ಬಳಿಕ ಹೃದಯ ತಪಾಸಣೆಗೆ ಮುಗಿಬೀಳುತ್ತಿರುವ ಸಾರ್ವಜನಿಕರು !

Prasthutha|

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ನಂತರ ಹೃದಯ ತಪಾಸಣೆಗೆ ಒಳಗಾಗುತ್ತಿರುವವರ ಸಂಖ್ಯೆ ಒಮ್ಮೆಲೇ ಹೆಚ್ಚಾಗಿದೆ.

- Advertisement -


ಶುಕ್ರವಾರ ಪುನೀತ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಇದಾದ ಬಳಿಕ ಜನರು ಆತಂಕಗೊಂಡು ಆಸ್ಪತ್ರೆಯೆಡೆಗೆ ಬರುತ್ತಿದ್ದಾರೆ.


ಬೆಂಗಳೂರಿನ ಜಯದೇವ ಆಸ್ಪತ್ರೆ ಸೇರಿದಂತೆ ನಗರದ ಬಹುತೇಕ ಹೃದ್ರೋಗ ಆಸ್ಪತ್ರೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಹೆಚ್ಚಿನ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡ ಬಗ್ಗೆ ವರದಿಯಾಗಿದೆ. ಜನರು ಸರತಿ ಸಾಲಿನಲ್ಲಿ ನಿಂತು ತಪಾಸಣೆಗೆ ಒಗಗಾಗುತ್ತಿರುವ ದೃಶ್ಯ ಹೆಚ್ಚಿನ ಆಸ್ಪತ್ರೆಗಳಲ್ಲಿ ಕಂಡುಬಂದಿದೆ. ಪುನೀತ್ ಅವರ ನಿಧನದ ನಂತರ ಜನರಲ್ಲಿ ಒಂದು ರೀತಿಯ ಆತಂಕ ಉಂಟಾಗಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

- Advertisement -


ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ, ನಿಯಮಿತವಾಗಿ ಸಾಮಾನ್ಯ ವ್ಯಾಯಾಮ ಮಾಡಿಕೊಂಡು, ಮಿತ ಆಹಾರ ಸೇವಿಸಿಕೊಂಡು ಒತ್ತಡ ರಹಿತ ಜೀವನ ನಡೆಸಿದರೆ ಸಾಕು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.



Join Whatsapp