ಆರ್ಯನ್ ಖಾನ್ ಅಪಹರಣಕ್ಕೆ ಸಮೀರ್ ವಾಂಖೆಡೆ ಸಂಚು: ಮುಂಬೈ ಸಚಿವ ನವಾಬ್ ಮಲಿಕ್ ಗಂಭೀರ ಆರೋಪ

Prasthutha|

ಮುಂಬೈ: ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ಆರ್ಯನ್ ಖಾನ್ ಅವರನ್ನು ಎನ್.ಸಿ.ಬಿ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ಅಪಹರಿಸಲು ಸಂಚು ರೂಪಿಸಿದ್ದರು ಎಂದು ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ, ಎನ್.ಸಿ.ಪಿ ವಕ್ತಾರ ನವಾಬ್ ಮಲಿಕ್ ಗಂಭೀರ ಆರೋಪ ಹೊರಿಸಿದ್ದಾರೆ.

- Advertisement -

ಮುಂಬೈನಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಲಿಕ್ ಈ ಹೇಳಿಕೆ ನೀಡಿದ್ದಾರೆ.

ಮಾತ್ರವಲ್ಲ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಎಂಬಾತನೇ ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ಮಾಸ್ಟರ್ ಮೈಂಡ್. ಈತ ಸುಲಿಗೆ ಮತ್ತು ಅಪಹರಣಕ್ಕೆ ಸಂಬಂಧಿಸಿದಂತೆ ಸಮೀರ್ ವಾಂಖೆಡ್ ಗೆ ನೆರವಾಗುತ್ತಿದ್ದ ಎಂದು ಅವರು ಆರೋಪಿಸಿದರು.

- Advertisement -

ಸದ್ಯ ಆರ್ಯನ್ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಅವರನ್ನು ಎನ್.ಸಿ.ಬಿ ತನಿಖಾ ತಂಡದಿಂದ ತೆರವುಗೊಳಿಸಿದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಸಿಂಗ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.



Join Whatsapp