ಭಾರತದ ವಿಭಜನೆಗೆ ಕಾರಣ ಮುಸ್ಲಿಮರಲ್ಲ, ಕಾಂಗ್ರೆಸ್ ಮತ್ತು ಅಂದಿನ ನಾಯಕರು: ಉವೈಸಿ ಕಟು ಟೀಕೆ

Prasthutha|

ಮೊರಾದಾಬಾದ್: ಭಾರತದ ವಿಭಜನೆಗೆ ಕಾಂಗ್ರೆಸ್ ಮತ್ತು ಅಂದಿನ ನಾಯಕರೇ ಕಾರಣ ಎಂದು ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಉವೈಸಿ ಆರೋಪಿಸಿದ್ದಾರೆ.

- Advertisement -

ಮುಹಮ್ಮದ್ ಅಲಿ ಜಿನ್ನಾ ಅವರನ್ನು ಭಾರತದ ಮೊದಲ ಪ್ರಧಾನಿಯನ್ನಾಗಿ ಮಾಡಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ನಾಯಕ ಒಪಿ ರಾಜ್ ಭರ್ ಹೇಳಿಕೆಗೆ ಉವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

“ಇತಿಹಾಸವನ್ನು ಓದದಿರುವ ಆರೆಸ್ಸೆಸ್, ಬಿಜೆಪಿ ಮತ್ತು ಸಮಾಜವಾದಿ ಪಕ್ಷಕ್ಕೆ ನಾನು ಸವಾಲು ಹಾಕುತ್ತೇನೆ. ವಿಭಜನೆಗೆ ಕಾರಣ ಮುಸ್ಲಿಮರಲ್ಲ. ಆ ಸಮಯದಲ್ಲಿ ನವಾಬರು ಅಥವಾ ಪದವೀಧರರಂತಹ ಪ್ರಭಾವಿ ಮುಸ್ಲಿಮರು ಮಾತ್ರ ಮತ ಚಲಾಯಿಸಬಹುದಾಗಿತ್ತು. ವಿಭಜನೆಗೆ ಕಾಂಗ್ರೆಸ್ ಮತ್ತು ಅಂದಿನ ನಾಯಕರು ಕಾರಣ” ಎಂದು ಉವೈಸಿ ಹೇಳಿದ್ದಾರೆ.

- Advertisement -

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸುಹೇಲ್ ದೇವ್ ಭಾರತೀಯ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.



Join Whatsapp