4 ಕೋಟಿ ರೂ. ಮೌಲ್ಯದ ವಜ್ರ ಚಿನ್ನ ನಾಪತ್ತೆ: ಪುತ್ರಿಯ ವಿರುದ್ಧವೇ ತಾಯಿ ದೂರು

Prasthutha|

ಬೆಂಗಳೂರು: ಕೋಟ್ಯಂತರ ರೂ ಮೌಲ್ಯದ ಚಿನ್ನಾಭರಣ ಕೊಂಡೊಯ್ದು ವಂಚಿಸಿದ್ದಾಳೆ ಎಂದು ಹೆತ್ತ ಮಗಳ ವಿರುದ್ಧವೇ ತಾಯಿ ಜೆಪಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ಸುಮಾರು 4 ಕೋಟಿ ರೂ. ಮೌಲ್ಯದ 7.5 ಕೆಜಿ ವಜ್ರ ಹಾಗೂ ಚಿನ್ನಾಭರಣ ತೆಗೆದುಕೊಂಡು ಮಗಳು ತೇಜವಂತಿ
ನಾಪತ್ತೆಯಾಗಿದ್ದಾಳೆ ಎಂದು ತಾಯಿ ವಿಜಯಲಕ್ಷ್ಮಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ, ಮನೆಗೆ ಬಂದಿದ್ದ ತೇಜವಂತಿ ಲಾಕರ್ ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ಚಿನ್ನ ತೆಗೆದುಕೊಂಡು ಹೋಗಿದ್ದಳು. ಆದರೆ ಚಿನ್ನ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ದಂಡಸಂಹಿತೆಯ ಸೆಕ್ಷನ್ 420ರ ಅಡಿ ಎಫ್ ಐಆರ್ ದಾಖಲಾಗಿದ್ದು, ಮಗಳು ತೇಜವಂತಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.



Join Whatsapp