ಉತ್ತರ ಪ್ರದೇಶ: ಪೊಲೀಸ್ ವಿಚಾರಣೆಯ ವೇಳೆ ಹಲ್ಲೆಗೊಳಗಾದ ವ್ಯಕ್ತಿ ಸಾವು !

Prasthutha|

ಕಾನ್ಪುರ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಠಾಣೆಗೆ ಕರೆದು  ಕ್ರೂರವಾಗಿ ಥಳಿಸಿ, ಬಳಿಕ ಆತ ಮೃತಪಟ್ಟ ಘಟನೆ ಕಾನ್ಪುರದ ಕಲ್ಯಾಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

 ಜಿತೇಂದ್ರ ಆಲಿಯಾಸ್ ಕಲ್ಲು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನವೆಂಬರ್ 5 ರಂದು  ಆತನ ವಿರುದ್ಧ ಕಾನ್ಪುರದ ಕಲ್ಯಾಣಪುರ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ಆತನನ್ನು  ಠಾಣೆಗೆ ಕರೆದೊಯ್ದಿದ್ದಾರೆ ಮತ್ತು ಅಲ್ಲಿ ಅವರನ್ನು ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಆತನನ್ನು ರಾತ್ರಿ ಮನೆ ಬಳಿ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

- Advertisement -

ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕುಟುಂಬದವರು ಒತ್ತಾಯಿಸಿದ್ದಾರೆ.



Join Whatsapp