ಕೇಂದ್ರ ಗೃಹ ಸಚಿವಾಲಯದ ಕಚೇರಿ ಮುಂದೆ ಟಿಎಂಸಿ ಸಂಸದರ ಪ್ರತಿಭಟನೆ

Prasthutha|

ನವದೆಹಲಿ: ತ್ರಿಪುರಾದಲ್ಲಿ ಪೊಲೀಸರ ಹಿಂಸಾಚಾರವನ್ನು ಖಂಡಿಸಿ ಟಿಎಂಸಿ ಸಂಸದರು ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವಾಲಯದ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಅವಕಾಶ ನೀಡಬೇಕು ಎಂದು ಸಂಸದರು ಘೋಷಣೆ ಕೂಗಿದರು.

- Advertisement -


ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ ನ ಮುಖಂಡೆ, ನಟಿ ಸಯೋನಿ ಘೋಷ್ ಅವರನ್ನು ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಬಂಧಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ತ್ರಿಪುರಾದಲ್ಲಿ ಪುನರಾವರ್ತನೆಯಾಗುತ್ತಿರುವ ಹಿಂಸಾಚಾರದ ನಿದರ್ಶನಗಳ ಕುರಿತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲು ಟಿಎಂಸಿ ನಿಯೋಗ ದೆಹಲಿಗೆ ತೆರಳಿದಾಗ ಸಚಿವರ ಭೇಟಿಗೆ ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಗೃಹ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಿದರು.



Join Whatsapp