ಮೋದಿ ಭೇಟಿ| ವಾರಣಾಸಿಯ ಮಸೀದಿಗೆ ಕೇಸರಿ ಬಣ್ಣ ಬಳಿದ ಉತ್ತರಪ್ರದೇಶ ಸರ್ಕಾರ!

Prasthutha|

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿಗೂ ಮುನ್ನ ಅಧಿಕಾರಿಗಳು ಮಸೀದಿಯ ಗೋಡೆಗೆ ಕೇಸರಿ ಬಣ್ಣ ಬಳಿದಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೋದಿ ಭೇಟಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದ ರಸ್ತೆಯಲ್ಲಿರುವ ಅಂಜುಮನ್ ಇಂತಸಾಮಿಯಾ ಮಸೀದಿಗೆ ಕೇಸರಿ ಬಣ್ಣ ಬಳಿಯಲಾಗಿದೆ ಮಸೀದಿ ಸಮಿತಿಯ ಸದಸ್ಯ ಮೊಹಮ್ಮದ್ ಇಜಾಝ್ ಇಸ್ಲಾಹಿ ತಿಳಿಸಿದ್ದಾರೆ.

ಮಸೀದಿಯ ಗೋಡೆಯು ಆರಂಭದಲ್ಲಿ ಬಿಳಿ ಬಣ್ಣದ್ದಾಗಿದ್ದು, ಮಸೀದಿ ಸಮಿತಿಯ ಜೊತೆ ಚರ್ಚಿಸದೆ ಕೇಸರಿ ಬಣ್ಣ ಬಳಿಯಲಾಗಿದೆ. ಇದೊಂದು ದೊಡ್ಡ ಷಡ್ಯಂತ್ರವಾಗಿದೆ ಎಂದು ಕಾಶಿ ವಿಶ್ವನಾಥ ದೇವಸ್ಥಾನದ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -

ಡಿ. 13ರಂದು ಮೋದಿ ವಾರಣಾಸಿಗೆ ಭೇಟಿ ನೀಡಲಿದ್ದಾರೆ.



Join Whatsapp