ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಯ್ ಕೈ; ಹಿರಿಯರು-ಕಿರಿಯರ ನಡುವೆ ಜಟಾಪಟಿ

Prasthutha|

ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಯುವ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದ ಬಗ್ಗೆ ವರದಿಯಾಗಿದೆ.

- Advertisement -

ಗಣರಾಜ್ಯೋತ್ಸವ ಪರೇಡಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರದ ನಡೆಯನ್ನು ಖಂಡಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಈ ಘಟನೆ ನಡೆದಿದೆ.

ಮಾಜಿ ಸಚಿವರಾದ ಯು.ಟಿ ಖಾದರ್, ರಮಾನಾಥ ರೈ, ಮಾಜಿ ಶಾಸಕ ಐವನ್ ಡಿಸೋಜಾ, ಪಿವಿ ಮೋಹನ್ ಅವರ ಸಮ್ಮುಖದಲ್ಲೇ ಈ ಘರ್ಷಣೆ ನಡೆದಿದ್ದು, ಬಳಿಕ ಹಿರಿಯ ನಾಯಕರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.

- Advertisement -

ಬಳಿಕ ನಿಗದಿಯಂತೆ “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ’ ಪಾದಯಾತ್ರೆ ನಡೆಯಿತು.



Join Whatsapp