ನೆಲ್ಯಾಡಿ, ಸುಬ್ರಹ್ಮಣ್ಯ ಸರ್ಕಾರಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಓ ಭೇಟಿ

Prasthutha|

ಮಂಗಳೂರು: ಜಿಲ್ಲೆಯ ಕೋವಿಡ್ ಲಸಿಕಾಕರಣದ ಪ್ರಗತಿ ಪರಿಶೀಲಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಶುಕ್ರವಾರ ನೆಲ್ಯಾಡಿ ಹಾಗ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಈ ಸಂದರ್ಭದಲ್ಲಿ ಎರಡೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾಧಿಕಾರಿಯವರು ಕೆಲವು ನಿರ್ದೇಶನಗಳನ್ನು ನೀಡಿದರು.

ನೆಲ್ಯಾಡಿಯಲ್ಲಿ ಮೊದಲ ಡೋಸ್ ಲಸಿಕೆ ಪಡೆಯದ ಸುಮಾರು 500 ಜನರಿದ್ದು, ಅವರಿಗೆ ಕಡ್ಡಾಯವಾಗಿ ಲಸಿಕೆ ನೀಡಲೇಬೇಕು, ಕೂಡಲೇ ಅಗತ್ಯ ಕ್ರಮವಹಿಸುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ನಿರ್ದೇಶನ ನೀಡಿದರು.

- Advertisement -

ಅದೇ ರೀತಿ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಪತ್ತೆ ಮಾಡಿ ಅವರಿಗೆ ಲಸಿಕೆ ನೀಡಬೇಕು ಎಂದು ತಿಳಿಸಿದರು.
ನೆಲ್ಯಾಡಿಯಲ್ಲಿ 18 ಸಕ್ರಿಯ ಪ್ರಕರಣಗಳಿವೆ, ಅವರ ಪ್ರಾಥಮಿಕ ಸಂಪರ್ಕಿತರ ಪತ್ತೆ ಕಾರ್ಯ ಮಾಡಬೇಕು ಹಾಗೂ ಅವರುಗಳು ಹೋಂ ಐಸೋಲೇಷನ್ನಲ್ಲಿರುವ ಬಗ್ಗೆ ಪರಿಶೀಲಿಸಬೇಕು ಎಂದು ಸಂಬಂಧಿಸಿದ ಸಿಬ್ಬಂದಿಗಳಿಗೆ ಸೂಚಿಸಿದರು.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕಾಕರಣದ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವವರ ಆರ್ಟಿ-ಪಿಸಿಆರ್ ವರದಿ ನೆಗೆಟಿವ್ ಆಗಿರಬೇಕು ಹಾಗೂ ಕೋವಿಡ್ನ ಎರಡೂ ಡೋಸ್ ಲಸಿಕೆ ಪಡೆದುಕೊಂಡಲ್ಲೀ ಮಾತ್ರ ದರ್ಶನಕ್ಕೆ ಅನುಮತಿಸುವಂತೆ ತಿಳಿಸಿದ ಅವರು ಅಲ್ಲಿ ಸಾಧ್ಯವಾಷ್ಟು ಮಟ್ಟಿಗೆ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.



Join Whatsapp