ಮಂಗಳೂರು: ಕಾಲೇಜು ಆವರಣಕ್ಕೆ ತಲವಾರು ಹಿಡಿದು ನುಗ್ಗಿದ ಪುಂಡರು

Prasthutha|

ಮಂಗಳೂರು: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಶ್ರೀದೇವಿ ಕಾಲೇಜು ಆವರಣಕ್ಕೆ ಪುಂಡರ ತಂಡವೊಂದು ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಗರದ ಬಳ್ಳಾಲ್ ಬಾಗ್ ನಲ್ಲಿ ನಡೆದಿದೆ.

- Advertisement -

ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು, ಈ ವೇಳೆ ಕೇರಳ ಮೂಲದ ವಿದ್ಯಾರ್ಥಿಗಳಿಗೆ ವಾಹನ ತಾಗಿತ್ತು. ಇದರ ಬಗ್ಗೆ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆದರೆ ಇದನ್ನೇ ನೆಪವಾಗಿರಿಸಿದ ಪುಂಡರು ಅಲ್ಲಿಂದ ಹಿಂತಿರುಗಿದ್ದು ಸ್ವಲ್ಪ ಹೊತ್ತಿನಲ್ಲಿ ಸ್ಥಳಕ್ಕೆ ತಲವಾರು ಹಿಡಿದು ಐದಾರು ಮಂದಿ ಕಾಲೇಜು ಆವರಣಕ್ಕೆ ಬಂದಿದ್ದಾರೆ. ಮಲಯಾಳಿಗಳು ಮತ್ತು ಇನ್ನೊಬ್ಬ ವಿದ್ಯಾರ್ಥಿಯನ್ನು ಹುಡುಕಾಟ ನಡೆಸಿದೆ. ತಲವಾರು ಹಿಡಿದು ಅತ್ತಿತ್ತ ಹೋಗಿದ್ದು, ಅಲ್ಲಿ ಮಲಯಾಳಿ ಹುಡುಗರಾಗಲೀ, ಬುದ್ಧಿಮಾತು ಹೇಳಿದ ವಿದ್ಯಾರ್ಥಿಯಾಗಲೀ ಸಿಕ್ಕಿರಲಿಲ್ಲ. ಹುಡುಗರು ಹೊರಗಿನವರಾಗಿದ್ದು, ಕಾಲೇಜಿಗೆ ಸಂಬಂಧಪಟ್ಟವರಲ್ಲ ಎಂದು ತಿಳಿದು ಬಂದಿದೆ.

ಕಾಲೇಜು ಆವರಣದಲ್ಲಿ ತಲವಾರು ಹಿಡಿದ ಪುಂಡರವೀಡಿಯೋವನ್ನು ಕಾಲೇಜಿನ ವಿದ್ಯಾರ್ಥಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು,  ವೈರಲ್ ಆಗಿದೆ.  ಬರ್ಕೆ ಠಾಣೆಯಲ್ಲಿ ಸ್ಥಳೀಯ ವಿದ್ಯಾರ್ಥಿ ದೂರು ನೀಡಿದ್ದು, ತಲವಾರು ಹಿಡಿದು ಬಂದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.



Join Whatsapp