ಮಡಿಕೇರಿ | ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ ಲಕ್ಷಾಂತರ ರೂ. ದರೋಡೆ ಮಾಡಿದ ಖದೀಮರು

Prasthutha|

ನಾಪೋಕ್ಲು: ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮಹಿಳೆಯರೇ ಇರುವ ಒಂಟಿ ಮನೆಗಳ ಮೇಲೆ ಅಪರಿಚಿತ ವ್ಯಕ್ತಿಗಳು ಹಾಗೂ ಕಳ್ಳರ ದಾಳಿ ಹೆಚ್ಚಾಗುತ್ತಿದೆ. ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿಗೇರಿಯಲ್ಲಿ ನಡೆದಿದೆ.

- Advertisement -

ಮಧ್ಯ ರಾತ್ರಿ ವಾಂಜಂಡ ಜಾನಕಿ (78) ಹಾಗೂ ಅವರ ತಂಗಿ ಅಮ್ಮಕ್ಕಿ (68) ವಾಸವಿದ್ದ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ನಾಲ್ವರು ಚೋರರು 2.5 ಲಕ್ಷ ನಗದು ಹಾಗೂ ಸುಮಾರು 83ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಮನೆಯೊಳಗೆ ನುಗ್ಗಿದ ಚೋರರು ಇಬ್ಬರು ಮಹಿಳೆಯರನ್ನು ಕೋಣೆಯೊಂದರಲ್ಲಿ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಚಾಕುವಿನಿಂದ ಹತ್ಯೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭ ಅಂಗಲಾಚಿದ ಮಹಿಳೆಯರು ನಮ್ಮನ್ನು ಏನೂ ಮಾಡಬೇಡಿ, ಹಣ, ಒಡವೆ ತೆಗೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಇದರಿಂದ ಸುಮ್ಮನಾದ ದುಷ್ಕರ್ಮಿಗಳು ಹಣ ಮತ್ತು ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.

- Advertisement -

ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ವಾಸವಿರುವ ಸಹೋದರ ನಿವೃತ್ತ ನ್ಯಾಯಾಧೀಶ ವಾಂಜಂಡ ಬೋಪಯ್ಯ ಅವರಿಗೆ ಮಹಿಳೆಯರು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯರನ್ನು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು.



Join Whatsapp