ವೈಫಲ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ಸರ್ಕಾರದಿಂದ ಹಿಜಾಬ್ ವಿವಾದ ಸೃಷ್ಟಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಇಸ್ಲಾಂ ಧರ್ಮದ ಪ್ರಕಾರ ಹಿಜಾಬ್ ಧರಿಸುವುದು ಒಂದು ಪದ್ಧತಿ. ಕುರಾನ್ ನಲ್ಲಿಯೂ ಇದರ ಉಲ್ಲೇಖವಿದೆ. ಇದರಿಂದ ಬೇರೆಯವರಿಗೆ ಏನು ತೊಂದರೆ? ಇದನ್ನೇ ನೆಪವಾಗಿಟ್ಟುಕೊಂಡು ಹೆಣ್ಣುಮಕ್ಕಳನ್ನು ಕಾಲೇಜಿನ ಒಳಬರಲು ಬಿಡದೆ ಇರುವ ಪ್ರಿನ್ಸಿಪಾಲ್ ನಡೆ ಅಮಾನವೀಯವಾದುದು. ಅವರನ್ನು ಈ ಕೂಡಲೇ ವಜಾಗೊಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆಡಳಿತಾರೂಢ ಬಿಜೆಪಿ ಸರ್ಕಾರ  ಜನರ ಗಮನ ಬೇರೆಡೆಗೆ ಸೆಳೆದು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಿಜಾಬ್ ಎಂಬ ಹೊಸ ವಿವಾದ ಹುಟ್ಟುಹಾಕಿದೆ. ಸಂಘ ಪರಿವಾರದವರು ತಾವೇ ಖರೀದಿ ಮಾಡಿ ವಿದ್ಯಾರ್ಥಿಗಳಿಗೆ ಕೇಸರು ಶಾಲು ಧರಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಇಂಥವರ ವಿರುದ್ಧ ಸಿಎಂ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

- Advertisement -



Join Whatsapp